ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಸಿ ಆಸ್ಪತ್ರೆಗೆ 8 ವೆಂಟಿಲೇಟರ್ ಸೌಲಭ್ಯ

ವೈದ್ಯರೊಂದಿಗೆ ಶಾಸಕ ಆರಗ ಜ್ಞಾನೇಂದ್ರ ಚರ್ಚೆ
Last Updated 3 ಏಪ್ರಿಲ್ 2021, 3:40 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಪಟ್ಟಣದ ಸರ್ಕಾರಿ ಜೆಸಿ ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ಅವರ ವಿಶೇಷ ಆಸಕ್ತಿಯಿಂದ ಪ್ರಧಾನ ಮಂತ್ರಿ ಕೇರ್ ನಿಧಿಯಿಂದ ಎಂಟು ವೆಂಟಿಲೇಟರ್ ಬಂದಿದ್ದು, ಆಸ್ಪತ್ರೆಗೆ ಅಳವಡಿಸಲಾಗಿದೆ.

ಶಾಸಕ ಆರಗ ಜ್ಞಾನೇಂದ್ರ ಅವರು ಶುಕ್ರವಾರ ಜೆಸಿ ಆಸ್ಪತ್ರೆಗೆ ಭೇಟಿ ನೀಡಿ ಕೊರೊನಾ ವೆಂಟಿಲೇಟರ್ ಅಳವಡಿಸಿರುವ ಕುರಿತು ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಜೊತೆ ಚರ್ಚಿಸಿದರು.

ಜೆಸಿ ಆಸ್ಪತ್ರೆಯಲ್ಲಿ ಕೋವಿಡ್ ವಾರ್ಡ್ ಸ್ಥಾಪಿಸಲಾಗಿದ್ದು, ಅದಕ್ಕೆ ಆಕ್ಸಿಜನ್ ಸಂಪರ್ಕ ನೀಡಲಾಗಿದೆ. ಇದಕ್ಕೆ ₹ 1 ಕೋಟಿ ಹಣ ಕೇಂದ್ರದಿಂದ ಬಂದಿದೆ. ಪ್ರತಿ ವಾರ್ಡಿಗೆ ಕೊರೊನಾ ವೆಂಟಿಲೇಟರ್ ಅಳವಡಿಕೆ ಮಾಡಲಾಗಿದೆ. ಕೆಎಫ್‌ಡಿ, ಕೊರೊನಾ ಬಂದರೂ ಜನರು ಹೆದರುವ ಅವಶ್ಯಕತೆ ಇಲ್ಲ. ಕೋವಿಡ್ ರೋಗಕ್ಕೆ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಎಲ್ಲಾ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಆಸ್ಪತ್ರೆಯ ಪ್ರಯೋಗಾಲಯಕ್ಕೆ ₹ 8 ಲಕ್ಷ ಮೌಲ್ಯದ ಯಂತ್ರಗಳನ್ನು ಪಡೆಯಲಾಗಿದೆ. ಎಲ್ಲ ಪರೀಕ್ಷೆಗಳನ್ನು ಇಲ್ಲಿಯೇ ಮಾಡಲಾಗುತ್ತದೆ. ಬಡವರಿಗೆ ಇದು ತುಂಬ ಸಹಕಾರಿ. ಆಸ್ಪತ್ರೆಗೆ ಬರುವ ಬಡ ರೋಗಿಗಳು ಬಿಪಿಎಲ್ ಕಾರ್ಡ್ ಹಿಡಿದುಕೊಂಡು ಬಂದರೆ ಉಚಿತ ಚಿಕಿತ್ಸೆ ಲಭಿಸಲಿದೆ ಎಂದು ಆರಗ ಜ್ಞಾನೇಂದ್ರಹೇಳಿದರು.

ಕೊರೊನಾ ಹಾಗೂ ಮಂಗನ ಕಾಯಿಲೆಗೆ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ. ಸಾಮಾನ್ಯ ರೋಗಿಗಳಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಇದ್ದು, ಆಸ್ಪತ್ರೆ ಸುಸಜ್ಜಿತವಾಗಿದೆ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯರಿದ್ದು, ಉತ್ತಮ ಚಿಕಿತ್ಸೆ ಸಿಗುತ್ತಿದೆಎಂದರು.

ಜೆಸಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಗಣೇಶ್ ಭಟ್, ತಾಲ್ಲೂಕು ವೈದ್ಯಾಧಿಕಾರಿ ಡಾ. ಅನಿಕೇತ್, ಜೆಸಿ ಆಸ್ಪತ್ರೆ ಆಡಳಿತಾಧಿಕಾರಿ ಡಾ. ನಿಶ್ಚಲ್, ಡಾ. ಗುರುರಾಜ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT