ನಗರದ ಡಿಎಆರ್ ಮೈದಾನದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಧ್ವಜಾರೋಹಣದ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಹಲವು ಜನಪರ ಯೋಜನೆಗಳನ್ನು ರೂಪಿಸಲಾಗಿದೆ. ಅಮೃತ ಯೋಜನೆ, ರೈತ ವಿದ್ಯಾನಿಧಿ, ಗ್ರಾಮ ಒನ್, ವಿವೇಕಾನಂದರ ಯುವಶಕ್ತಿ ಯೋಜನೆ, ಬೆಳಕು ಕಾರ್ಯಕ್ರಮಗಳ ಮೂಲಕ ಕರ್ನಾಟಕವನ್ನ ಅಭಿವೃದ್ಧಿ ಪಥದತ್ತ ಕೊಂಡೊಯ್ಯಲಾಗಿದೆ ಎಂದರು.