<p><strong>ಶಿವಮೊಗ್ಗ</strong>: ರಿಪ್ಪನ್ಪೇಟೆ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಅವರ ಸಾಕು ನಾಯಿ ಪತ್ತೆ ಹಚ್ಚಿದೆ. ನಾಯಿಯ ಸ್ವಾಮಿ ನಿಷ್ಠೆಗೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p>ಸೂಡೂರು ಗ್ರಾಮದ ಶೇಖರಪ್ಪ (50)ಮೂರುದಿನಗಳ ಹಿಂದೆ ಬೆಳಿಗ್ಗೆ 6 ಗಂಟೆಗೆ ಸೌದೆ ತರಲು ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ. ಪ್ರತಿ ಸಾರಿ ಕಾಡಿಗೆ ಹೋದಾಗಲೂ 10 ಗಂಟೆಯ ಒಳಗೆ ಮನೆಗೆ ಹಿಂದಿರುಗುತ್ತಿದ್ದ ಅವರು 11 ಗಂಟೆಯಾದರೂ ಮನೆಗೆ ಬಂದಿರಲಿಲ್ಲ.</p>.<p>ಹೀಗಾಗಿ ಸ್ಥಳೀಯರು ಕಾಡಿಗೆ ಹೋಗಿ ಹುಡುಕಾಡಿದ್ದರು. ಆದರೂ ಶೇಖರಪ್ಪ ಅವರ ಸುಳಿವು ಸಿಕ್ಕಿರಲಿಲ್ಲ. ಇದರಿಂದ ಗಾಬರಿಗೊಂಡು ಮಧ್ಯಾಹ್ನದ ವೇಳೆಗೆ ಅವರನ್ನು ಹುಡುಕಲು ಗ್ರಾಮದ 100ಕ್ಕೂ ಹೆಚ್ಚು ಜನರು ಕಾಡಿನೊಳಗೆ ಹೋಗಿದ್ದಾರೆ.<br />ಪ್ರತಿ ಬಾರಿ ಅವರು ಕಾಡಿಗೆ ಹೋಗುವ ದಾರಿ ಕಟ್ಟಿಗೆ ಅರಸುವ ಸ್ಥಳ ಎಲ್ಲವನ್ನೂ ತಡಕಾಡಿದ್ದಾರೆ. ಆದರೂ ಪ್ರಯೋಜನವಾಗಿಲ್ಲ. ಶೇಖರಪ್ಪ ಅವರನ್ನು ಹುಡುಕಲು ಗ್ರಾಮಸ್ಥರೊಂದಿಗೆ ಬಂದಿದ್ದ ನಾಯಿ ಗ್ರಾಮದ ಜನರನ್ನು ಬಿಟ್ಟು ಬೇರೆ ದಾರಿ ಹಿಡಿದು ಮುನ್ನುಗ್ಗಿದೆ. ಕೊನೆಗೆ ಸಂಜೆ 4 ಗಂಟೆಯ ಸುಮಾರಿಗೆ ಶೇಖರಪ್ಪ ಅವರನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಗ್ರಾಮಸ್ಥರನ್ನು ಕರೆ ತಂದಿದೆ.</p>.<p>ಮರದ ಕೆಳಗೆ ಪ್ರಜ್ಞೆ ಇಲ್ಲದೆ ಶೇಖರಪ್ಪ ಬಿದ್ದಿದ್ದು, ಅವರನ್ನು ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈಗ ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ. ಶೇಖರಪ್ಪ ಆಯನೂರಿನ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ರಿಪ್ಪನ್ಪೇಟೆ ಸಮೀಪದ ಸೂಡೂರು ಗ್ರಾಮದಲ್ಲಿ ಕಾಡಿಗೆ ಕಟ್ಟಿಗೆ ತರಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ಅವರ ಸಾಕು ನಾಯಿ ಪತ್ತೆ ಹಚ್ಚಿದೆ. ನಾಯಿಯ ಸ್ವಾಮಿ ನಿಷ್ಠೆಗೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.</p>.<p>ಸೂಡೂರು ಗ್ರಾಮದ ಶೇಖರಪ್ಪ (50)ಮೂರುದಿನಗಳ ಹಿಂದೆ ಬೆಳಿಗ್ಗೆ 6 ಗಂಟೆಗೆ ಸೌದೆ ತರಲು ಮನೆಯ ಸಮೀಪದ ಕಾಡಿಗೆ ಹೋಗಿದ್ದಾರೆ. ಪ್ರತಿ ಸಾರಿ ಕಾಡಿಗೆ ಹೋದಾಗಲೂ 10 ಗಂಟೆಯ ಒಳಗೆ ಮನೆಗೆ ಹಿಂದಿರುಗುತ್ತಿದ್ದ ಅವರು 11 ಗಂಟೆಯಾದರೂ ಮನೆಗೆ ಬಂದಿರಲಿಲ್ಲ.</p>.<p>ಹೀಗಾಗಿ ಸ್ಥಳೀಯರು ಕಾಡಿಗೆ ಹೋಗಿ ಹುಡುಕಾಡಿದ್ದರು. ಆದರೂ ಶೇಖರಪ್ಪ ಅವರ ಸುಳಿವು ಸಿಕ್ಕಿರಲಿಲ್ಲ. ಇದರಿಂದ ಗಾಬರಿಗೊಂಡು ಮಧ್ಯಾಹ್ನದ ವೇಳೆಗೆ ಅವರನ್ನು ಹುಡುಕಲು ಗ್ರಾಮದ 100ಕ್ಕೂ ಹೆಚ್ಚು ಜನರು ಕಾಡಿನೊಳಗೆ ಹೋಗಿದ್ದಾರೆ.<br />ಪ್ರತಿ ಬಾರಿ ಅವರು ಕಾಡಿಗೆ ಹೋಗುವ ದಾರಿ ಕಟ್ಟಿಗೆ ಅರಸುವ ಸ್ಥಳ ಎಲ್ಲವನ್ನೂ ತಡಕಾಡಿದ್ದಾರೆ. ಆದರೂ ಪ್ರಯೋಜನವಾಗಿಲ್ಲ. ಶೇಖರಪ್ಪ ಅವರನ್ನು ಹುಡುಕಲು ಗ್ರಾಮಸ್ಥರೊಂದಿಗೆ ಬಂದಿದ್ದ ನಾಯಿ ಗ್ರಾಮದ ಜನರನ್ನು ಬಿಟ್ಟು ಬೇರೆ ದಾರಿ ಹಿಡಿದು ಮುನ್ನುಗ್ಗಿದೆ. ಕೊನೆಗೆ ಸಂಜೆ 4 ಗಂಟೆಯ ಸುಮಾರಿಗೆ ಶೇಖರಪ್ಪ ಅವರನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಗ್ರಾಮಸ್ಥರನ್ನು ಕರೆ ತಂದಿದೆ.</p>.<p>ಮರದ ಕೆಳಗೆ ಪ್ರಜ್ಞೆ ಇಲ್ಲದೆ ಶೇಖರಪ್ಪ ಬಿದ್ದಿದ್ದು, ಅವರನ್ನು ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಸಿದ್ದಾರೆ. ಈಗ ಚೇತರಿಸಿಕೊಂಡು ಮನೆಗೆ ಮರಳಿದ್ದಾರೆ. ಶೇಖರಪ್ಪ ಆಯನೂರಿನ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>