ಹೀಗಾಗಿ ಸ್ಥಳೀಯರು ಕಾಡಿಗೆ ಹೋಗಿ ಹುಡುಕಾಡಿದ್ದರು. ಆದರೂ ಶೇಖರಪ್ಪ ಅವರ ಸುಳಿವು ಸಿಕ್ಕಿರಲಿಲ್ಲ. ಇದರಿಂದ ಗಾಬರಿಗೊಂಡು ಮಧ್ಯಾಹ್ನದ ವೇಳೆಗೆ ಅವರನ್ನು ಹುಡುಕಲು ಗ್ರಾಮದ 100ಕ್ಕೂ ಹೆಚ್ಚು ಜನರು ಕಾಡಿನೊಳಗೆ ಹೋಗಿದ್ದಾರೆ.
ಪ್ರತಿ ಬಾರಿ ಅವರು ಕಾಡಿಗೆ ಹೋಗುವ ದಾರಿ ಕಟ್ಟಿಗೆ ಅರಸುವ ಸ್ಥಳ ಎಲ್ಲವನ್ನೂ ತಡಕಾಡಿದ್ದಾರೆ. ಆದರೂ ಪ್ರಯೋಜನವಾಗಿಲ್ಲ. ಶೇಖರಪ್ಪ ಅವರನ್ನು ಹುಡುಕಲು ಗ್ರಾಮಸ್ಥರೊಂದಿಗೆ ಬಂದಿದ್ದ ನಾಯಿ ಗ್ರಾಮದ ಜನರನ್ನು ಬಿಟ್ಟು ಬೇರೆ ದಾರಿ ಹಿಡಿದು ಮುನ್ನುಗ್ಗಿದೆ. ಕೊನೆಗೆ ಸಂಜೆ 4 ಗಂಟೆಯ ಸುಮಾರಿಗೆ ಶೇಖರಪ್ಪ ಅವರನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಗ್ರಾಮಸ್ಥರನ್ನು ಕರೆ ತಂದಿದೆ.