ರೈತರು ಉಪಯೋಗಿಸುತ್ತಿರುವ ಬೀಜ, ಗೊಬ್ಬರ, ಔಷಧಗಳು ಸೇರಿ ಕೃಷಿ ಪರಿಕರಗಳ ಬೆಲೆ ದುಬಾರಿಯಾಗಿದೆ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ಕೃಷಿ ಸಲಕರಣೆಗಳ ಮೇಲೆ ವಿಧಿಸುತ್ತಿರುವ ತೆರಿಗೆ ಮನ್ನಾ ಮಾಡಬೇಕು. ಬೆಳೆಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿಕೊಡಬೇಕು. ರೈತರು ಎದುರಿಸುತ್ತಿರುವ ಆರ್ಥಿಕ ಸಂಕಷ್ಟಗಳನ್ನು ಹೊಗಲಾಡಿಸಲು ಅಧಿಕಾರಿಗಳ ನಿಯೋಗ ರಚಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.