ಶಿವಮೊಗ್ಗ: ರಜೆಯ ದಿನ ಭಾನುವಾರ ಸೂರ್ಯ ಇನ್ನೂ ಕಣ್ಣು ಬಿಟ್ಟಿರಲಿಲ್ಲ, ಅಷ್ಟೊತ್ತಿಗಾಗಲೇ ಕೈಯಲ್ಲಿ ಸಲಿಕೆ, ಗುದ್ದಲಿ, ಬುಟ್ಟಿ ಹಾಗೂ ಖಾಲಿ ಚೀಲಗಳೊಂದಿಗೆ 100ಕ್ಕೂ ಹೆಚ್ಚು ಸ್ವಯಂ ಸೇವಕರ ತಂಡ ಸ್ವಚ್ಛತೆಗೆ ಮುಂದಾಯಿತು. ಗಿಡಗಂಟಿ, ಮದ್ಯದ ಖಾಲಿ ಬಾಟಲಿ ಹಾಗೂ ತ್ಯಾಜ್ಯದಿಂದಾಗಿ ಹಾಳು ಕೊಂಪೆಯಂತಿದ್ದ ಎಪಿಎಂಸಿ ಎದುರಿನ ಸರ್ಕಾರಿ ಅಂಗವಿಕಲರ ಸಹಾಯವಾಣಿ ಕೇಂದ್ರದ ಆವರಣ ಎರಡೇ ತಾಸಿನಲ್ಲಿ ಸ್ವಚ್ಛಗೊಳಿಸಿ ಹೊಸ ರೂಪ ನೀಡಲಾಯಿತು.