ಶಿಕಾರಿಪುರ:ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ನಾರಾಯಣಗುರುಗಳು ಶ್ರಮಿಸಿದ್ದರು. ನಾರಾಯಣಗುರು ಸೇರಿದಂತೆ ಸಮಾಜದಉದ್ಧಾರಕ್ಕಾಗಿ ಶ್ರಮಿಸಿದವರನ್ನುಒಂದು ಜಾತಿಗೆ ಸೀಮಿತಗೊಳಿಸಬಾರದು ಎಂದು ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಉಪನ್ಯಾಸಕ ಕೆ.ಎಚ್. ಪುಟ್ಟಪ್ಪಹೇಳಿದರು.
ತಾಲ್ಲೂಕು ಪಂಚಾಯಿತಿಯಲ್ಲಿ ಶನಿವಾರ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಆರ್ಯ ಈಡಿಗ ಸಮಾಜ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಾರಾಯಣಗುರುಗಳು ಕೇರಳದಲ್ಲಿ ಹಿಂದುಳಿದ ವರ್ಗಗಳ ಪರ ಚಳುವಳಿ ನಡೆಸಿದ್ದರು. ಹಿಂದುಳಿದ ವರ್ಗಗಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದರು ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ರೇಖಾಬಾಯಿ ಮಂಜುನಾಥ್ ಸಿಂಗ್ ಉದ್ಘಾಟಿಸಿದರು.
ತಹಶೀಲ್ದಾರ್ ಎಂ.ಪಿ. ಕವಿರಾಜ್, ಉಪತಹಶೀಲ್ದಾರ್ ಮಂಜುನಾಥ್, ಸಿಡಿಪಿಒ ನಂದಕುಮಾರ್, ಆರ್ಯ ಈಡಿಗ ಸಮಾಜದ ಪದಾಧಿಕಾರಿಗಳು ಇದ್ದರು.