ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಕೆರೆಹಿತ್ಲು ಗ್ರಾಮದ ಕೃಷಿಕ ಗಣೇಶ್ ಕೃಷಿಯಲ್ಲಿ ತೊಡಗಿಕೊಳ್ಳುವ ಮೂಲಕ ಆದಾಯ ಮೂಲವನ್ನು ಕಂಡುಕೊಂಡಿದ್ದಾರೆ. ಕೃಷಿಯಲ್ಲಿಯೂ ಉತ್ತಮ ಸಾಧನೆ ಮಾಡಿ ಕೈತುಂಬ ಆದಾಯ ಪಡೆಯಬಹುದು ಎಂಬುದನ್ನು ತೋರಿಸುವ ಮೂಲಕ ಸದಾ ಕೆಲಸದಲ್ಲೇ ತಮ್ಮ ಜೀವನ ಕಳೆಯುವ ನಗರ ಉದ್ಯೋಗಿಗಳ ಮುಂದೆ ನೆಮ್ಮದಿಯ ಬದುಕು ಕಟ್ಟಿಕೊಳ್ಳುತ್ತಿದ್ದಾರೆ.