ಇಲ್ಲಿನ ಚುನಾವಣಾ ಕಚೇರಿಯಲ್ಲಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಈಶ್ವರಪ್ಪಗೆ ಚೀಟಿ ಹಂಚುವುದಕ್ಕೆ ಜನ ಇರುವುದಿಲ್ಲ ಎಂದು ಜ್ಞಾನೇಂದ್ರ ಹೇಳಿದ್ದ. ಕ್ಷೇತ್ರ ಬಿಟ್ಟು ಅವನಿಗೆ ಬೇರೇನೂ ಗೊತ್ತಿಲ್ಲ. ಗೃಹಮಂತ್ರಿ ಆದಾಗಲೂ ರಾಜ್ಯ ಸುತ್ತುವ ಬದಲು ಕೂಪ ಮಂಡೂಕದ ರೀತಿಯಲ್ಲಿ ತೀರ್ಥಹಳ್ಳಿ ಸುತ್ತಿದ್ದ’ ಎಂದು ಛೇಡಿಸಿದರು.