<p><strong>ಶಿವಮೊಗ್ಗ:</strong> ‘ಮಂಗಳೂರಿನ ಬಂಟ್ವಾಳ ತಾಲ್ಲೂಕಿನ ಇರಾ ಕೋಡಿಯ ಅಬ್ದುಲ್ ರಹೀಂ ಹತ್ಯೆ ಪ್ರಕರಣವನ್ನು ಪ್ರತೀಕಾರದ ಕೊಲೆ ಎಂದು ಏಕಾಏಕಿ ಬಿಂಬಿಸುವುದು ಸರಿಯಲ್ಲ. ಮೊದಲು ಕೂಲಂಕುಷವಾಗಿ ಪರಿಶೀಲಿಸಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. </p><p>ಇಲ್ಲಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಸಿದ ಅವರು, ಏಕಾಏಕಿ ಮಾಧ್ಯಮಗಳಲ್ಲಿ ಪ್ರತೀಕಾರದ ಕೊಲೆ ಎಂದು ಬಿಂಬಿಸಿದರೆ ಏನಾಗಲಿದೆ ಎಂಬುದನ್ನು ಯಾರಾದರೂ ಗಮನಿಸಿದ್ದಾರಾ ಎಂದು ಪ್ರಶ್ನಿಸಿದರು.</p><p>ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ನಟ ಕಮಲ್ ಹಾಸನ್ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಬೇರೆಯವರಿಂದ ಕನ್ನಡದ ಬಗ್ಗೆ ಕಲಿಯಬೇಕಿಲ್ಲ. ಕಮಲ್ ಹಾಸನ್ ಯಾವ ನೆಲೆಯಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದಾರೆ ಎಂಬುದನ್ನು ನೋಡಬೇಕು ಎಂದರು.</p><p>ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವನಾಗಿ ಎರಡು ವರ್ಷ ಪೂರ್ಣಗೊಳಿಸಿದ್ದು, ಮೇ 29 ರಂದು ಬೆಂಗಳೂರಿನಲ್ಲಿ ‘ಎರಡು ವರ್ಷ; ಶಿಕ್ಷಣದಲ್ಲಿ ಹರುಷ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದರು.</p><p>ಕೋವಿಡ್ ಬಗ್ಗೆ ಪ್ರತಿಕ್ರಿಯಿಸಿ,‘ಕೇಂದ್ರ ನೀಡುವ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ. ಮಕ್ಕಳಿಗೆ ಯಾವುದೇ ಮಾರ್ಗಸೂಚಿ ಸದ್ಯಕ್ಕೆ ಇಲ್ಲ. ಆದರೆ, ಎಚ್ಚರಿಕೆಯಿಂದ ಇರಬೇಕು ಎಂದರು.</p>.ಅಬ್ದುಲ್ ಹತ್ಯೆ | ಮಂಗಳೂರಿನ ಕೆಟ್ಟ ವ್ಯವಸ್ಥೆಗೆ ಬಿಜೆಪಿ ಕಾರಣ: ಗುಂಡೂರಾವ್ ಕಿಡಿ.ರಹೀಂ ಹತ್ಯೆ ಪ್ರಕರಣ: ಭುಗಿಲೆದ್ದ ಆಕ್ರೋಶ, ಸುರತ್ಕಲ್ನಲ್ಲಿ ಬಸ್ಗೆ ಕಲ್ಲು.ರಹೀಂ ಹತ್ಯೆ ಪ್ರಕರಣ: ಭುಗಿಲೆದ್ದ ಆಕ್ರೋಶ, ಸುರತ್ಕಲ್ನಲ್ಲಿ ಬಸ್ಗೆ ಕಲ್ಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ಮಂಗಳೂರಿನ ಬಂಟ್ವಾಳ ತಾಲ್ಲೂಕಿನ ಇರಾ ಕೋಡಿಯ ಅಬ್ದುಲ್ ರಹೀಂ ಹತ್ಯೆ ಪ್ರಕರಣವನ್ನು ಪ್ರತೀಕಾರದ ಕೊಲೆ ಎಂದು ಏಕಾಏಕಿ ಬಿಂಬಿಸುವುದು ಸರಿಯಲ್ಲ. ಮೊದಲು ಕೂಲಂಕುಷವಾಗಿ ಪರಿಶೀಲಿಸಬೇಕು’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. </p><p>ಇಲ್ಲಿ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಸಿದ ಅವರು, ಏಕಾಏಕಿ ಮಾಧ್ಯಮಗಳಲ್ಲಿ ಪ್ರತೀಕಾರದ ಕೊಲೆ ಎಂದು ಬಿಂಬಿಸಿದರೆ ಏನಾಗಲಿದೆ ಎಂಬುದನ್ನು ಯಾರಾದರೂ ಗಮನಿಸಿದ್ದಾರಾ ಎಂದು ಪ್ರಶ್ನಿಸಿದರು.</p><p>ಕನ್ನಡ ತಮಿಳಿನಿಂದ ಹುಟ್ಟಿರುವುದು ಎಂದು ನಟ ಕಮಲ್ ಹಾಸನ್ ಹೇಳಿಕೆ ಪ್ರತಿಕ್ರಿಯಿಸಿದ ಅವರು, ಬೇರೆಯವರಿಂದ ಕನ್ನಡದ ಬಗ್ಗೆ ಕಲಿಯಬೇಕಿಲ್ಲ. ಕಮಲ್ ಹಾಸನ್ ಯಾವ ನೆಲೆಯಲ್ಲಿ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ಹೇಳಿದ್ದಾರೆ ಎಂಬುದನ್ನು ನೋಡಬೇಕು ಎಂದರು.</p><p>ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವನಾಗಿ ಎರಡು ವರ್ಷ ಪೂರ್ಣಗೊಳಿಸಿದ್ದು, ಮೇ 29 ರಂದು ಬೆಂಗಳೂರಿನಲ್ಲಿ ‘ಎರಡು ವರ್ಷ; ಶಿಕ್ಷಣದಲ್ಲಿ ಹರುಷ’ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದರು.</p><p>ಕೋವಿಡ್ ಬಗ್ಗೆ ಪ್ರತಿಕ್ರಿಯಿಸಿ,‘ಕೇಂದ್ರ ನೀಡುವ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಲಿದೆ. ಮಕ್ಕಳಿಗೆ ಯಾವುದೇ ಮಾರ್ಗಸೂಚಿ ಸದ್ಯಕ್ಕೆ ಇಲ್ಲ. ಆದರೆ, ಎಚ್ಚರಿಕೆಯಿಂದ ಇರಬೇಕು ಎಂದರು.</p>.ಅಬ್ದುಲ್ ಹತ್ಯೆ | ಮಂಗಳೂರಿನ ಕೆಟ್ಟ ವ್ಯವಸ್ಥೆಗೆ ಬಿಜೆಪಿ ಕಾರಣ: ಗುಂಡೂರಾವ್ ಕಿಡಿ.ರಹೀಂ ಹತ್ಯೆ ಪ್ರಕರಣ: ಭುಗಿಲೆದ್ದ ಆಕ್ರೋಶ, ಸುರತ್ಕಲ್ನಲ್ಲಿ ಬಸ್ಗೆ ಕಲ್ಲು.ರಹೀಂ ಹತ್ಯೆ ಪ್ರಕರಣ: ಭುಗಿಲೆದ್ದ ಆಕ್ರೋಶ, ಸುರತ್ಕಲ್ನಲ್ಲಿ ಬಸ್ಗೆ ಕಲ್ಲು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>