ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ | ಅಧೀಕ್ಷಕಿಗೆ ನಿಂದನೆ: ಜಿ.ಪಂ ಸಿಬ್ಬಂದಿ ಪ್ರತಿಭಟನೆ

Last Updated 15 ಡಿಸೆಂಬರ್ 2020, 9:59 IST
ಅಕ್ಷರ ಗಾತ್ರ

ಶಿವಮೊಗ್ಗ: ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ವೀರಭದ್ರಪ್ಪ ಪೂಜಾರಿ ಅವರು ಕಚೇರಿ ಅಧೀಕ್ಷಕರಿಗೆ ನಿಂದಿಸಿದ್ದಾರೆ ಎಂದು ಆರೋಪಿಸಿ ಮಹಿಳಾ ನೌಕರರು ಮಂಗಳವಾರ ಪ್ರತಿಭಟನೆ ನಡೆಸಿದರು.

ಅಧೀಕ್ಷಕಿ ವಿಕ್ಟೋರಿಯಾ ಮೇರಿ ಅವರಿಗೆ ಸಮಯ ನೀಡದೇ ತ್ವರಿತವಾಗಿ ಮಾಹಿತಿ ಒದಗಿಸಲು ತಾಕೀತು ಮಾಡಿದ್ದಾರೆ. ಎಲ್ಲ ಸಿಬ್ಬಂದಿ ಮುಂದೆ ಮುಜುಗರವಾಗುವ ರೀತಿ ನಿಂದಿಸಿದ್ದಾರೆ. ಬೆದರಿಕೆ ಹಾಕಿದ್ದಾರೆ. ವೀರಭದ್ರಪ್ಪ ಪೂಜಾರಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಹಿಳಾ ಅಧಿಕಾರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ನಂತರ ಜಿಲ್ಲಾ ಪಂಚಾಯಿತಿ ಆಂತರಿಕ ಮಹಿಳಾ ದೂರು ಸಮಿತಿ ಹಾಗೂ ಉಪ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು.

ನೌಕರರಾದ ಶಿವಮ್ಮ, ಶೈಲಜಾ, ಭಾರತಿ, ಸುಪ್ರಿಯಾ, ದೇವಮ್ಮ, ಮೀನಾಕ್ಷಿ, ಶೋಭಾ, ಸುಮಾ, ಪದ್ಮಾವತಿ, ಮಂಜುಳಾ, ನಾಗರತ್ನಾ, ಸಂಧ್ಯಾ ಮತ್ತಿತರರು ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT