ಶಿವಮೊಗ್ಗ: ಕಾರಿನ ಬಾಡಿಗೆ ಹಣ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೃಷಿ ವಿಶ್ವವಿದ್ಯಾಲಯದ ಹಣಕಾಸು ವಿಭಾಗದ ಅಧಿಕಾರಿ ಗಣೇಶಪ್ಪ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಇಲ್ಲಿಯ ಕೃಷಿ ವಿಶ್ವವಿದ್ಯಾಲಯಕ್ಕೆ ಗುತ್ತಿಗೆ ಆಧಾರದಲ್ಲಿ ಬಾಡಿಗೆ ಬಿಟ್ಟಿದ್ದಕಾರಿನ ಚಾಲಕನಿಗೆ ಬಾಡಿಗೆ ಹಣ ( ₹ 1 ಲಕ್ಷ) ವನ್ನು ನೀಡಲು ಗಣೇಶಪ್ಪ ₹ 5 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವಾಹನ ಚಾಲಕ ಎಸಿಬಿಗೆ ದೂರು ನೀಡಿದ್ದರು.
ಎಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎಸಿಬಿ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆದಿದೆ.