ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಗುಂಬೆ: ಕ್ಯಾಂಟರ್‌ ಅಪಘಾತ; ವ್ಯಕ್ತಿ ಸಾವು

Published 10 ಮೇ 2024, 16:20 IST
Last Updated 10 ಮೇ 2024, 16:20 IST
ಅಕ್ಷರ ಗಾತ್ರ

ತೀರ್ಥಹಳ್ಳಿ: ಆಗುಂಬೆಯ ಮಂದರತಿ ಗ್ರಾಂಡ್‌ ಹೋಟೆಲ್‌ ಮುಂಭಾಗ ನಿಂತಿದ್ದ ಟಿಪ್ಪರ್‌ಗೆ ಹಿಂದಿನಿಂದ ಕ್ಯಾಂಟರ್‌ ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಒಬ್ಬರು ಮೃತಪಟ್ಟಿದ್ದಾರೆ.

ಕ್ಯಾಂಟರ್‌ ಒಳಗೆ ಮಲಗಿದ್ದ ದೊಡ್ಡಮನೆಕೇರಿ ಸಲ್ಮಾನ್‌ (28) ಮೃತ ವ್ಯಕ್ತಿ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಬ್ರಿಯಿಂದ ತೀರ್ಥಹಳ್ಳಿಗೆ ಬರುತ್ತಿದ್ದಾಗ ಈ ಅವಘಡ ಸಂಭವಿಸದೆ. ಕ್ಯಾಂಟರ್‌ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸಲ್ಮಾನ್‌ ದೊಡ್ಡಮನೆಕೇರಿ ಮೊಟ್ಟೆ ವ್ಯಾಪಾರಿ ರಿಯಾಜ್‌ ಅವರ ಪುತ್ರ.

ಆಗುಂಬೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT