ಸಾಗರ: ತಾಲ್ಲೂಕಿನ ಉಳ್ಳೂರು ಸಮೀಪದ ಹಕ್ರೆಕೊಪ್ಪದ ಬಳಿ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ತೂಜಡ್ಡು ಗ್ರಾಮದ ಪ್ರೇಮನಾಥ್ ಗೌಡ (50) ಮೃತಪಟ್ಟವರು.
ಲಾರಿ ಹಾಗೂ ಎರಡು ಬೈಕ್ಗಳು ಡಿಕ್ಕಿಯಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.