ರಿಪ್ಪನ್ಪೇಟೆ: ಪಟ್ಟಣದ ಶಿವಮೊಗ್ಗ ರಸ್ತೆಯ ಸಿದ್ದಪನಗುಡಿ ಬಳಿಶುಕ್ರವಾರ ಲಾರಿ ಹಾಗೂ ಬೈಕ್ ನಡುವೆ ಮುಖಾ ಮುಖಿ ಡಿಕ್ಕಿಯಾಗಿ ಬೈಕ್ ಸವಾರರು ಲಾರಿಯಡಿ ಸಿಲುಕಿದರೂ ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದಿದ್ದಾರೆ.
ಆಯನೂರಿನಿಂದ ರಿಪ್ಪನ್ಪೇಟೆ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ರಿಪ್ಪನ್ಪೇಟೆಯಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಲಾರಿ ನಡುವೆ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಬೈಕ್ ಸವಾರರು ಲಾರಿ ಅಡಿಗೆ ಸಿಲುಕಿದ್ದರು. ಸ್ಥಳೀಯರ ನೆರವಿನಿಂದ ಅವರನ್ನು ಹೊರ ತೆಗೆಯಲಾಯಿತು. ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಶಿವಮೊಗ್ಗಕ್ಕೆ ತೆರಳುತಿದ್ದ ಕೆಎಸ್ಆರ್ಟಿಸಿ ಬಸ್ ಏಕಾಏಕಿ ಬ್ರೇಕ್ ಹಾಕಿದ್ದರಿಂದ ಹಿಂಬದಿಯಿದ್ದ ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ಬಸ್ನ ಹಿಂಬದಿಗೆ ಗುದ್ದಿದೆ. ಬಳಿಕ ಎದುರಿನಿಂದ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದು, ರಸ್ತೆಯ ಪಕ್ಕದ ಮರಕ್ಕೆ ತಾಗಿ ನಿಂತಿದೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.