ಆನಂದಪುರ: ಸಮೀಪದ ಮುಂಬಾಳು ಗ್ರಾಮದ ಬಳಿ ನಿಂತ ಶಾಲಾ ಬಸ್ಗೆ ಮಿನಿ ಲಗೇಜ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬಸ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ. ಬಸ್ನಲ್ಲಿದ್ದ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.
ಶಾಲಾ ವಾಹನದ ಡ್ರೈವರ್ಗೆ ಸಣ್ಣಪುಟ್ಟ ಗಾಯಾಗಳಾಗಿವೆ. ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯಲು ಬಸ್ ಅನ್ನು ಮುಂಬಾಳು ಗ್ರಾಮದ ಬಳಿ ನಿಲ್ಲಿಸಲಾಗಿತ್ತು. ಶಿವಮೊಗ್ಗದ ಕಡೆಯಿಂದ ಬಂದ ಮಿನಿ ಲಗೇಜ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.
ವಾಹನದಲ್ಲಿ 24 ವಿದ್ಯಾರ್ಥಿಗಳು ಇದ್ದರು ಎಂದು ತಿಳಿದುಬಂದಿದೆ. ಲಗೇಜ್ ವಾಹನದ ಡ್ರೈವರ್ ವಾಹನ ಬಿಟ್ಟು ಪರಾರಿಯಾಗಿದ್ದು, ಪೋಲಿಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.