ಸಂಜೆ ಶಾಲೆ ಮುಗಿಸಿಕೊಂಡು ಕನಕನಗರದ ಮನೆಗೆ ರಸ್ತೆಯ ಎಡಭಾಗದಿಂದ ಬರುತ್ತಿರುವಾಗ ಸಾಗರ ಕಡೆಯಿಂದ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕನ ಕಾಲುಗಳು ಸಂಪೂರ್ಣ ಜಖಂ ಆಗಿದ್ದು, ಬಾಲಕನ ತಲೆಯ ಹಿಂಭಾಗಕ್ಕೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರವಾಗಿ ಅಸ್ವಸ್ಥಗೊಂಡ ಬಾಲಕನನ್ನು ಶಿವಮೊಗ್ಗದ
ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ ಬಾಲಕ ಸಾವನ್ನಪ್ಪಿದ್ದಾನೆ. ಕಾರಿನ ಚಾಲಕ ಪರಾರಿಯಾಗಿದ್ದಾನೆ.