ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖುಲಾಸೆಗೊಂಡಿದ್ದ ಆರೋಪಿಗೆ ಹೈಕೋರ್ಟ್‌ನಿಂದ ಶಿಕ್ಷೆ

Last Updated 10 ಜನವರಿ 2021, 16:18 IST
ಅಕ್ಷರ ಗಾತ್ರ

ಸಾಗರ: ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೋಡಿ ಗ್ರಾಮದಲ್ಲಿ 2012ನೇ ಸಾಲಿನಲ್ಲಿ ನಡೆದಿದ್ದ 70 ವರ್ಷದ ವೃದ್ಧರೊಬ್ಬರ ಕೊಲೆ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದ ಆರೋಪಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೇರಳದ ಪಾಲಕಾಡು ಜಿಲ್ಲೆಯ ಶಿಜು ಕುರಿಯನ್ ಕೆರೋಡಿ ಗ್ರಾಮದಲ್ಲಿ ಜೋಸ್ ಫಾಕನ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಫಾಕನ್ ಅವರ ಮಕ್ಕಳು ವಿದೇಶದಲ್ಲಿದ್ದು, ಅವರು ಒಬ್ಬರೇ ಇಲ್ಲಿ ನೆಲೆಸಿದ್ದರು.

ಫಾಕನ್ ಅವರ ಶವ ತೋಟದ ಗೊಬ್ಬರದ ಗುಂಡಿಯಲ್ಲಿ ಪತ್ತೆಯಾಗಿತ್ತು. ಕೆಲಸಗಾರ ಶಿಜು ಕುರಿಯನ್‌ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಈತನೇ ಫಾಕನ್ ಅವರನ್ನು ಹಣದ ಆಸೆಗಾಗಿ ಕೊಲೆ ಮಾಡಿ ಗೊಬ್ಬರದ ಗುಂಡಿಯಲ್ಲಿ ಹೂತಿಟ್ಟಿದ್ದ ವಿಷಯ ಬೆಳಕಿಗೆ ಬಂದಿತ್ತು.

ಅಂದಿನ ಡಿವೈಎಸ್‌ಪಿ ಡಾ. ಶರಣಪ್ಪ ನೇತೃತ್ವದ ತಂಡ ತನಿಖೆ ನಡೆಸಿ ಶಿಜು ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ಖುಲಾಸೆ ಮಾಡಿತ್ತು.

ಸರ್ಕಾರದ ಪರವಾಗಿ ಪ್ರಕರಣ ನಡೆಸಿದ ಸರ್ಕಾರಿ ಅಭಿಯೋಜಕ ವಿ.ಜಿ. ಯಳಗೇರಿ ಈ ಪ್ರಕರಣದ ಮೇಲ್ಮನವಿ ಸಲ್ಲಿಸಲು ಶಿಫಾರಸು ಮಾಡಿದ್ದರು. ಈ ಪ್ರಕಾರ ಅಭಿಯೋಜಕ ಇಲಾಖೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಶಿಜು ಕುರಿಯನ್‌ಗೆ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ. ಕೇರಳದ ಪಾಲಕ್ಕಾಡ್‌ನಲ್ಲಿದ್ದ ಶಿಜು ಕುರಿಯನ್‌ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಂಧನಕ್ಕೆ ಒಳಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT