<p><strong>ಸಾಗರ: </strong>ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೋಡಿ ಗ್ರಾಮದಲ್ಲಿ 2012ನೇ ಸಾಲಿನಲ್ಲಿ ನಡೆದಿದ್ದ 70 ವರ್ಷದ ವೃದ್ಧರೊಬ್ಬರ ಕೊಲೆ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದ ಆರೋಪಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p>ಕೇರಳದ ಪಾಲಕಾಡು ಜಿಲ್ಲೆಯ ಶಿಜು ಕುರಿಯನ್ ಕೆರೋಡಿ ಗ್ರಾಮದಲ್ಲಿ ಜೋಸ್ ಫಾಕನ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಫಾಕನ್ ಅವರ ಮಕ್ಕಳು ವಿದೇಶದಲ್ಲಿದ್ದು, ಅವರು ಒಬ್ಬರೇ ಇಲ್ಲಿ ನೆಲೆಸಿದ್ದರು.</p>.<p>ಫಾಕನ್ ಅವರ ಶವ ತೋಟದ ಗೊಬ್ಬರದ ಗುಂಡಿಯಲ್ಲಿ ಪತ್ತೆಯಾಗಿತ್ತು. ಕೆಲಸಗಾರ ಶಿಜು ಕುರಿಯನ್ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಈತನೇ ಫಾಕನ್ ಅವರನ್ನು ಹಣದ ಆಸೆಗಾಗಿ ಕೊಲೆ ಮಾಡಿ ಗೊಬ್ಬರದ ಗುಂಡಿಯಲ್ಲಿ ಹೂತಿಟ್ಟಿದ್ದ ವಿಷಯ ಬೆಳಕಿಗೆ ಬಂದಿತ್ತು.</p>.<p>ಅಂದಿನ ಡಿವೈಎಸ್ಪಿ ಡಾ. ಶರಣಪ್ಪ ನೇತೃತ್ವದ ತಂಡ ತನಿಖೆ ನಡೆಸಿ ಶಿಜು ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ಖುಲಾಸೆ ಮಾಡಿತ್ತು.</p>.<p>ಸರ್ಕಾರದ ಪರವಾಗಿ ಪ್ರಕರಣ ನಡೆಸಿದ ಸರ್ಕಾರಿ ಅಭಿಯೋಜಕ ವಿ.ಜಿ. ಯಳಗೇರಿ ಈ ಪ್ರಕರಣದ ಮೇಲ್ಮನವಿ ಸಲ್ಲಿಸಲು ಶಿಫಾರಸು ಮಾಡಿದ್ದರು. ಈ ಪ್ರಕಾರ ಅಭಿಯೋಜಕ ಇಲಾಖೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.</p>.<p>ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಶಿಜು ಕುರಿಯನ್ಗೆ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ. ಕೇರಳದ ಪಾಲಕ್ಕಾಡ್ನಲ್ಲಿದ್ದ ಶಿಜು ಕುರಿಯನ್ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಂಧನಕ್ಕೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ: </strong>ತಾಲ್ಲೂಕಿನ ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೋಡಿ ಗ್ರಾಮದಲ್ಲಿ 2012ನೇ ಸಾಲಿನಲ್ಲಿ ನಡೆದಿದ್ದ 70 ವರ್ಷದ ವೃದ್ಧರೊಬ್ಬರ ಕೊಲೆ ಪ್ರಕರಣದಲ್ಲಿ ಸ್ಥಳೀಯ ನ್ಯಾಯಾಲಯದಲ್ಲಿ ಖುಲಾಸೆಗೊಂಡಿದ್ದ ಆರೋಪಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ.</p>.<p>ಕೇರಳದ ಪಾಲಕಾಡು ಜಿಲ್ಲೆಯ ಶಿಜು ಕುರಿಯನ್ ಕೆರೋಡಿ ಗ್ರಾಮದಲ್ಲಿ ಜೋಸ್ ಫಾಕನ್ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಫಾಕನ್ ಅವರ ಮಕ್ಕಳು ವಿದೇಶದಲ್ಲಿದ್ದು, ಅವರು ಒಬ್ಬರೇ ಇಲ್ಲಿ ನೆಲೆಸಿದ್ದರು.</p>.<p>ಫಾಕನ್ ಅವರ ಶವ ತೋಟದ ಗೊಬ್ಬರದ ಗುಂಡಿಯಲ್ಲಿ ಪತ್ತೆಯಾಗಿತ್ತು. ಕೆಲಸಗಾರ ಶಿಜು ಕುರಿಯನ್ನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಈತನೇ ಫಾಕನ್ ಅವರನ್ನು ಹಣದ ಆಸೆಗಾಗಿ ಕೊಲೆ ಮಾಡಿ ಗೊಬ್ಬರದ ಗುಂಡಿಯಲ್ಲಿ ಹೂತಿಟ್ಟಿದ್ದ ವಿಷಯ ಬೆಳಕಿಗೆ ಬಂದಿತ್ತು.</p>.<p>ಅಂದಿನ ಡಿವೈಎಸ್ಪಿ ಡಾ. ಶರಣಪ್ಪ ನೇತೃತ್ವದ ತಂಡ ತನಿಖೆ ನಡೆಸಿ ಶಿಜು ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಯನ್ನು ಖುಲಾಸೆ ಮಾಡಿತ್ತು.</p>.<p>ಸರ್ಕಾರದ ಪರವಾಗಿ ಪ್ರಕರಣ ನಡೆಸಿದ ಸರ್ಕಾರಿ ಅಭಿಯೋಜಕ ವಿ.ಜಿ. ಯಳಗೇರಿ ಈ ಪ್ರಕರಣದ ಮೇಲ್ಮನವಿ ಸಲ್ಲಿಸಲು ಶಿಫಾರಸು ಮಾಡಿದ್ದರು. ಈ ಪ್ರಕಾರ ಅಭಿಯೋಜಕ ಇಲಾಖೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.</p>.<p>ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಶಿಜು ಕುರಿಯನ್ಗೆ ಜೀವಾವಧಿ ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದೆ. ಕೇರಳದ ಪಾಲಕ್ಕಾಡ್ನಲ್ಲಿದ್ದ ಶಿಜು ಕುರಿಯನ್ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬಂಧನಕ್ಕೆ ಒಳಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>