ರಂಗ ಶಿಕ್ಷಣ ಕೇಂದ್ರಗಳ ಜವಾಬ್ದಾರಿಗಳೇನು ಎಂಬುದರ ಬಗ್ಗೆ ರಾಜೇಂದ್ರನ್ ಅವರಿಗೆ ಸ್ಪಷ್ಟವಾದ ಕಲ್ಪನೆಗಳಿತ್ತು. ರಂಗ ಶಾಲೆಗಳ ವಿದ್ಯಾರ್ಥಿಗಳಿಂದಲೂ ಕಲಿಯಲು ಸಾಧ್ಯವಿದೆ ಎಂಬ ವಿನಯ ಕೂಡ ಅವರಲ್ಲಿತ್ತು. ಈ ಮೂಲಕ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆಯನ್ನು ವೃದ್ಧಿಸುವ ಅನೇಕ ಮಾರ್ಗಗಳನ್ನು ಅವರು ಕಂಡುಕೊಂಡಿದ್ದರು ಎಂದು ವಿವರಿಸಿದರು.