<p>ರಿಪ್ಪನ್ಪೇಟೆ (ಶಿವಮೊಗ್ಗ ಜಿಲ್ಲೆ): ‘ಜೈನ ಸಮುದಾಯವನ್ನು ಪ್ರವರ್ಗ 2 ‘ಬಿ’ಗೆ ಸೇರಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಬೇಕು’ ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಒತ್ತಾಯಿಸಿದರು.</p>.<p>ಹೊಂಬುಜದ ಪಾರ್ಶ್ವನಾಥ ತೀರ್ಥಂಕರರ ಮತ್ತು ಪದ್ಮಾವತಿ ಅಮ್ಮನವರ ಸನ್ನಿಧಾನದ ಜಿನದತ್ತರಾಯ ಸಭಾಮಂಟಪ ಅರ್ಹದಾಸ ವೇದಿಕೆಯಲ್ಲಿ ಬುಧವಾರ ನಡೆದ ನಾಲ್ಕನೇ ದಿನದ ಪಂಚಕಲ್ಯಾಣ ಮಹೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪಾದಯಾತ್ರೆಯ ಮೂಲಕ ಪುಣ್ಯ ಕ್ಷೇತ್ರಗಳ ದರ್ಶನ ಮಾಡುವ ಮುನಿಗಳು ತಂಗಲು ಸರ್ಕಾರಿ ಶಾಲಾ ಕೊಠಡಿಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಕೆಲವೆಡೆ ಅವರಿಗೆ ಜೀವ ಭದ್ರತೆ ಸಿಗುತ್ತಿಲ್ಲ. ಸರ್ಕಾರ ಅವರಿಗೆ ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ದೇಶದಲ್ಲಿ ಶೇ 2ರಷ್ಟು ಜನಸಂಖ್ಯೆ ಹೊಂದಿರುವ ಜೈನ ಸಮುದಾಯದ ಆಚಾರ–ವಿಚಾರ, ತತ್ವ–ಸಿದ್ಧಾಂತಗಳನ್ನು ಕಾಲಕಾಲಕ್ಕೆ ಸಮಾಜಕ್ಕೆ ಪರಿಚಯಿಸುತ್ತಿರುವ ಹೊಂಬುಜ ಮಠದ ಭಟ್ಟಾರಕರು ಸಮುದಾಯದವರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>‘ಪಾದಯಾತ್ರೆಯ ಮೂಲಕ ಪುಣ್ಯ ಕ್ಷೇತ್ರಗಳ ದರ್ಶನ ಮಾಡುವ ಮುನಿಗಳಿಗೆ ಸೂಕ್ತ ಭದ್ರತೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು,</p>.<p>ಆಚಾರ್ಯ ಗುಣಧರನಂದಿ ಮುನಿ ಮಹಾರಾಜರು, ಮುನಿಶ್ರೀ ಪುಣ್ಯಸಾಗರ ಮಹಾರಾಜರು, ಆಯಿರ್ಕ ನೂತನ ಮತಿ ಮಾತಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಿಪ್ಪನ್ಪೇಟೆ (ಶಿವಮೊಗ್ಗ ಜಿಲ್ಲೆ): ‘ಜೈನ ಸಮುದಾಯವನ್ನು ಪ್ರವರ್ಗ 2 ‘ಬಿ’ಗೆ ಸೇರಿಸುವ ಮೂಲಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಉದ್ಯೋಗ ಕಲ್ಪಿಸಬೇಕು’ ಎಂದು ಹೊಂಬುಜ ಮಠದ ಪೀಠಾಧಿಕಾರಿ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ವರ್ಯ ಸ್ವಾಮೀಜಿ ಒತ್ತಾಯಿಸಿದರು.</p>.<p>ಹೊಂಬುಜದ ಪಾರ್ಶ್ವನಾಥ ತೀರ್ಥಂಕರರ ಮತ್ತು ಪದ್ಮಾವತಿ ಅಮ್ಮನವರ ಸನ್ನಿಧಾನದ ಜಿನದತ್ತರಾಯ ಸಭಾಮಂಟಪ ಅರ್ಹದಾಸ ವೇದಿಕೆಯಲ್ಲಿ ಬುಧವಾರ ನಡೆದ ನಾಲ್ಕನೇ ದಿನದ ಪಂಚಕಲ್ಯಾಣ ಮಹೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪಾದಯಾತ್ರೆಯ ಮೂಲಕ ಪುಣ್ಯ ಕ್ಷೇತ್ರಗಳ ದರ್ಶನ ಮಾಡುವ ಮುನಿಗಳು ತಂಗಲು ಸರ್ಕಾರಿ ಶಾಲಾ ಕೊಠಡಿಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದು, ಕೆಲವೆಡೆ ಅವರಿಗೆ ಜೀವ ಭದ್ರತೆ ಸಿಗುತ್ತಿಲ್ಲ. ಸರ್ಕಾರ ಅವರಿಗೆ ರಕ್ಷಣೆ ನೀಡಬೇಕು’ ಎಂದು ಮನವಿ ಮಾಡಿದರು.</p>.<p>‘ದೇಶದಲ್ಲಿ ಶೇ 2ರಷ್ಟು ಜನಸಂಖ್ಯೆ ಹೊಂದಿರುವ ಜೈನ ಸಮುದಾಯದ ಆಚಾರ–ವಿಚಾರ, ತತ್ವ–ಸಿದ್ಧಾಂತಗಳನ್ನು ಕಾಲಕಾಲಕ್ಕೆ ಸಮಾಜಕ್ಕೆ ಪರಿಚಯಿಸುತ್ತಿರುವ ಹೊಂಬುಜ ಮಠದ ಭಟ್ಟಾರಕರು ಸಮುದಾಯದವರಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವುದು ಶ್ಲಾಘನೀಯ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದರು.</p>.<p>‘ಪಾದಯಾತ್ರೆಯ ಮೂಲಕ ಪುಣ್ಯ ಕ್ಷೇತ್ರಗಳ ದರ್ಶನ ಮಾಡುವ ಮುನಿಗಳಿಗೆ ಸೂಕ್ತ ಭದ್ರತೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು,</p>.<p>ಆಚಾರ್ಯ ಗುಣಧರನಂದಿ ಮುನಿ ಮಹಾರಾಜರು, ಮುನಿಶ್ರೀ ಪುಣ್ಯಸಾಗರ ಮಹಾರಾಜರು, ಆಯಿರ್ಕ ನೂತನ ಮತಿ ಮಾತಾಜಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>