ಶಿವಮೊಗ್ಗ: ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ–20 ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆಯಾಗಿದ್ದು, ಏ.18ರಿಂದ ಗುಜರಾತ್ನ ರಾಜ್ಕೋಟ್ನಲ್ಲಿ ಆರಂಭಗೊಳ್ಳುವ ಹಿರಿಯ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.
ಅದಿತಿ ರಾಜೇಶ್ ಅವರು ಸಹ್ಯಾದ್ರಿ ಕಾಲೇಜಿನಲ್ಲಿರುವ ಕ್ರೀಡಾಂಗಣದಲ್ಲಿ ಕಳೆದ 8 ವರ್ಷಗಳಿಂದ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ ಅವರ ಬಳಿ ತರಬೇತಿಯನ್ನು ಪಡೆಯುತ್ತಿದ್ದಾರೆ.
ಅದಿತಿ ರಾಜೇಶ್ ಅವರಿಗೆ ಕೆಎಸ್ಸಿಎ ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್.ಅರುಣ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥಸ್ವಾಮಿ ಶುಭ ಹಾರೈಸಿದ್ದಾರೆ.