ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವಮೊಗ್ಗ: ಎರಡು ದಿನಗಳ ಬಳಿಕ ಬಿಡುವು ನೀಡಿದ ಮಳೆ

Last Updated 16 ಅಕ್ಟೋಬರ್ 2020, 11:32 IST
ಅಕ್ಷರ ಗಾತ್ರ

ಶಿವಮೊಗ್ಗ: ಎರಡು ದಿನಗಳು ಆರ್ಭಟಿಸಿದ್ದ ಮಳೆ ಶುಕ್ರವಾರ ಬಿಡುವು ನೀಡಿದೆ. ಜಿಲ್ಲೆಯ ಎಲ್ಲೆಡೆ ಸುರಿದ ಭಾರಿ ಮಳೆಗೆ ಹೊಸನಗರ ತಾಲ್ಲೂಕಿನಲ್ಲಿ ಗುಡ್ಡ ಕುಸಿದ್ದು ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿಲ್ಲ. ಸಂಪೆಕಟ್ಟೆಯಿಂದ ಕಟ್ಟಿನಹೊಳೆಯ ತನಕ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ. ಸಾರ್ವಜನಿಕರು, ಪ್ರವಾಸಿಗರು ಸಂಚರಿಸಲು ಯಾವುದೇ ತೊಂದರೆ ಇಲ್ಲ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಮತ್ತಿಮನೆ ಸುಬ್ರಹ್ಮಣ್ಯ ಹೇಳಿದರು.

ಬುಧವಾರ ರಾತ್ರಿ ಸುರಿದ ಮಳೆಗೆ ಶಂಭುಲಿಂಗೇಶ್ವರ ದೇವಾಲಯ, ಇತಿಹಾಸ ಪ್ರಸಿದ್ಧ ದೇವಗಂಗೆ ಕೊಳದ ದಂಡೆ ಕುಸಿದಿದೆ. ಕೊಳದ ಸಮೀಪವೇ ಮಣ್ಣಿನ ರಾಶಿ ಬಿದ್ದಿದೆ.

ತಗ್ಗಿದ ಒಳ ಹರಿವು: ಜಲಾಶಯಗಳ ಒಳ ಹರಿವು ಮಧ್ಯಾಹ್ನದ ವೇಳೆಗೆ ತಗ್ಗಿದೆ. ಭದ್ರಾ ಜಲಾಶಯಕ್ಕೆ ಬೆಳಿಗ್ಗೆ 10 ಸಾವಿರ ಕ್ಯುಸೆಕ್, ಲಿಂಗನಮಕ್ಕಿಗೆ 20 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿತ್ತು. ಸಂಜೆಯ ವೇಳೆಗೆ ಅರ್ಧದಷ್ಟು ಕಡಿಮೆಯಾಗಿದೆ.

ಅಕಾಲಿಕ ಮಳೆಯಿಂದ ಅಡಿಕೆ, ಭತ್ತ ಮತ್ತಿತರ ಬೆಳೆಗಳಿಗೆ ಸಾಕಷ್ಟು ಹಾನಿಯಾಗಿದೆ. ನೂರಕ್ಕು ಹೆಚ್ಚು ಮನೆಗಳಿಗೆ ಧಕ್ಕೆಯಾಗಿದೆ. ಹಾನಿ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT