ಮೂಲತಹ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದೊಗ್ಗನಾಳು ಗ್ರಾಮದ ಗಂಗಾಪ್ರಸಾದ್ ಶಿವಮೊಗ್ಗದ ಬಸವೇಶ್ವರ ನಗರದಲ್ಲಿ ನೆಲೆಸಿದ್ದರು. ಎರಡು ದಿನಗಳ ಹಿಂದೆ ಮನೆಯಿಂದ ಹೋದವರು ಮತ್ತೆ ಮರಳಿರಲಿಲ್ಲ. ಕಾರು ಸಾಸ್ವೆಹಳ್ಳಿಯಲ್ಲಿ ಪತ್ತೆಯಾಗಿದೆ. ಅವರ ಸಾವು ಅನುಮಾಸ್ಪದವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಅವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ.