<p><strong>ಶಿವಮೊಗ್ಗ:</strong>ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>ಜೂನ್ 15ರಿಂದ ಅಕ್ಟೋಬರ್ 15ರವರೆಗೆತೀರ್ಥಹಳ್ಳಿ, ಉಡುಪಿರಸ್ತೆಯ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.</p>.<p>ವಾಹನಗಳು ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ-ಕೆರೆಕಟ್ಟೆ, ಕಾರ್ಕಳ-ಉಡುಪಿ ಮಂಗಳೂರು ಮಾರ್ಗ ಅಥವಾಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ ಎಂದುತಿಳಿಸಿದ್ದಾರೆ.</p>.<p>ಹಿಂದಿನ ಮಳೆಗಾಲದಲ್ಲಿ ತಿರುವಿನ ರಸ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದು ಅಪಾಯ ಎದುರಾಗಿತ್ತು. ಹಾಗಾಗಿ, ಸ್ಥಳ ಪರಿಶೀಲನೆ ನಡೆಸಿದರಾಷ್ಟ್ರಿಯ ಹೆದ್ದಾರಿವಿಭಾಗದ ಕಾರ್ಯಪಾಲಕ ಎಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಸಾರಿಗೆ ಅಧಿಕಾರಿಗಳು ನಿಷೇಧಅಗತ್ಯಎಂದು ವರದಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong>ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಂಗಳವಾರ ಆದೇಶ ಹೊರಡಿಸಿದ್ದಾರೆ.</p>.<p>ಜೂನ್ 15ರಿಂದ ಅಕ್ಟೋಬರ್ 15ರವರೆಗೆತೀರ್ಥಹಳ್ಳಿ, ಉಡುಪಿರಸ್ತೆಯ ಆಗುಂಬೆ ಘಾಟಿಯಲ್ಲಿ ಅಧಿಕ ಭಾರದ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.</p>.<p>ವಾಹನಗಳು ಶಿವಮೊಗ್ಗ, ತೀರ್ಥಹಳ್ಳಿ, ಆಗುಂಬೆ, ಶೃಂಗೇರಿ-ಕೆರೆಕಟ್ಟೆ, ಕಾರ್ಕಳ-ಉಡುಪಿ ಮಂಗಳೂರು ಮಾರ್ಗ ಅಥವಾಶಿವಮೊಗ್ಗ, ತೀರ್ಥಹಳ್ಳಿ, ಮಾಸ್ತಿಕಟ್ಟೆ, ಹುಲಿಕಲ್, ಹೊಸಂಗಡಿ, ಸಿದ್ದಾಪುರ, ಉಡುಪಿ ಮಾರ್ಗದಲ್ಲಿ ಸಂಚರಿಸಬಹುದಾಗಿದೆ ಎಂದುತಿಳಿಸಿದ್ದಾರೆ.</p>.<p>ಹಿಂದಿನ ಮಳೆಗಾಲದಲ್ಲಿ ತಿರುವಿನ ರಸ್ತೆ ದೊಡ್ಡ ಪ್ರಮಾಣದಲ್ಲಿ ಕುಸಿದು ಅಪಾಯ ಎದುರಾಗಿತ್ತು. ಹಾಗಾಗಿ, ಸ್ಥಳ ಪರಿಶೀಲನೆ ನಡೆಸಿದರಾಷ್ಟ್ರಿಯ ಹೆದ್ದಾರಿವಿಭಾಗದ ಕಾರ್ಯಪಾಲಕ ಎಂಜಿನಿಯರ್, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ,ಸಾರಿಗೆ ಅಧಿಕಾರಿಗಳು ನಿಷೇಧಅಗತ್ಯಎಂದು ವರದಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>