<p><strong>ಶಿವಮೊಗ್ಗ:</strong> ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಹೋಬಳಿ ಕೋಡ್ಲು ಗ್ರಾಮದಲ್ಲಿ ಉಕ್ಕಿ ಹರಿಯುವ ನದಿಯ ನೀರಿನಲ್ಲಿಯೇ ಗ್ರಾಮಸ್ಥರು ಅಂತ್ಯಸಂಸ್ಕಾರಕ್ಕೆ ಶವ ಹೊತ್ತು ಸಾಗುವ ವಿಡಿಯೊ ಈಗ ವೈರಲ್ ಆಗಿದೆ.</p>.<p>ಗ್ರಾಮದ ಹಿರಿಯರಾದ ತಮ್ಮಯ್ಯಗೌಡ (92) ವಯೋಸಹಜ ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದ್ದಾರೆ. ಸಂಜೆ ಅವರ ಶವವನ್ನು ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಭಾರೀ ಮಳೆಯಿಂದಾಗಿ ಮಾಲತಿ ನದಿ ಉಕ್ಕಿ ಹರಿದಿದ್ದು, ಸ್ಮಶಾನ ಕೂಡ ಜಲಾವೃತವಾಗಿದೆ.</p>.<p>ಹೀಗಾಗಿ ಗ್ರಾಮಸ್ಥರು ಎದೆಯಮಟ್ಟದವರೆಗೆ ಹರಿಯುತ್ತಿದ್ದ ನೀರಿನಲ್ಲಿಯೇ ಶವವನ್ನು ಸ್ಮಶಾನಕ್ಕೆ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.</p>.<p>ತಮ್ಮಯ್ಯ ಗೌಡರು ರೈತ ಹೋರಾಟದಲ್ಲಿ ಗುರುತಿಸಿಕೊಂಡಿದ್ದು, ಕಾಗೋಡು ಸತ್ಯಾಗ್ರಹದ ವೇಳೆ 17 ದಿನಗಳ ಕಾಲ ಬೆಂಗಳೂರಿಗೆ ಪಾದಯಾತ್ರೆಯಲ್ಲಿ ತೆರಳಿ ಈ ಭಾಗದಲ್ಲಿ ರೈತ ಮುಖಂಡನಾಗಿ ಗುರುತಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ತೀರ್ಥಹಳ್ಳಿ ತಾಲ್ಲೂಕು ಆಗುಂಬೆ ಹೋಬಳಿ ಕೋಡ್ಲು ಗ್ರಾಮದಲ್ಲಿ ಉಕ್ಕಿ ಹರಿಯುವ ನದಿಯ ನೀರಿನಲ್ಲಿಯೇ ಗ್ರಾಮಸ್ಥರು ಅಂತ್ಯಸಂಸ್ಕಾರಕ್ಕೆ ಶವ ಹೊತ್ತು ಸಾಗುವ ವಿಡಿಯೊ ಈಗ ವೈರಲ್ ಆಗಿದೆ.</p>.<p>ಗ್ರಾಮದ ಹಿರಿಯರಾದ ತಮ್ಮಯ್ಯಗೌಡ (92) ವಯೋಸಹಜ ಅನಾರೋಗ್ಯದಿಂದ ಶನಿವಾರ ಮೃತಪಟ್ಟಿದ್ದಾರೆ. ಸಂಜೆ ಅವರ ಶವವನ್ನು ಗ್ರಾಮದ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ಸಿದ್ಧತೆ ಮಾಡಿಕೊಂಡಿದ್ದಾರೆ. ಆದರೆ ಭಾರೀ ಮಳೆಯಿಂದಾಗಿ ಮಾಲತಿ ನದಿ ಉಕ್ಕಿ ಹರಿದಿದ್ದು, ಸ್ಮಶಾನ ಕೂಡ ಜಲಾವೃತವಾಗಿದೆ.</p>.<p>ಹೀಗಾಗಿ ಗ್ರಾಮಸ್ಥರು ಎದೆಯಮಟ್ಟದವರೆಗೆ ಹರಿಯುತ್ತಿದ್ದ ನೀರಿನಲ್ಲಿಯೇ ಶವವನ್ನು ಸ್ಮಶಾನಕ್ಕೆ ಕೊಂಡೊಯ್ದು ಅಂತ್ಯಕ್ರಿಯೆ ನೆರವೇರಿಸಿದ್ದಾರೆ.</p>.<p>ತಮ್ಮಯ್ಯ ಗೌಡರು ರೈತ ಹೋರಾಟದಲ್ಲಿ ಗುರುತಿಸಿಕೊಂಡಿದ್ದು, ಕಾಗೋಡು ಸತ್ಯಾಗ್ರಹದ ವೇಳೆ 17 ದಿನಗಳ ಕಾಲ ಬೆಂಗಳೂರಿಗೆ ಪಾದಯಾತ್ರೆಯಲ್ಲಿ ತೆರಳಿ ಈ ಭಾಗದಲ್ಲಿ ರೈತ ಮುಖಂಡನಾಗಿ ಗುರುತಿಸಿಕೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>