ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಅಜಿತ್ ಹೆಗಡೆಗೆ ಕಾವ್ಯ ಮಾಣಿಕ್ಯ ರಾಜ್ಯ ಪ್ರಶಸ್ತಿ

Last Updated 24 ಜೂನ್ 2018, 14:34 IST
ಅಕ್ಷರ ಗಾತ್ರ

ಸೊರಬ: ತಾಲ್ಲೂಕಿನ ಡಾ.ಅಜಿತ್ ಹೆಗಡೆ ಹರೀಶಿ ಅವರ ಕವನ ಸಂಕಲನ ಬಿಳಿಮಲ್ಲಿಗೆಯ ಬಾವುಟ ಸೇರಿದಂತೆ ೯ ಕೃತಿಗಳಿಗೆ ಹಾಸನದ ಮಾಣಿಕ್ಯ ಪ್ರಕಾಶನವು ಕೊಡಮಾಡುವ ಕಾವ್ಯ ಮಾಣಿಕ್ಯ ರಾಜ್ಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.

2016–17ರಲ್ಲಿ ಪ್ರಕಟವಾದ ಕವನ ಸಂಕಲನಗಳಿಗೆ ಈ ಪ್ರಶಸ್ತಿಯನ್ನು ಕೊಡಲಾಗುವುದು. ೨೦೧೬ರ ಸಾಲಿನಲ್ಲಿ 4 ಹಾಗೂ ೨೦೧೭ರ ಸಾಲಿನಲ್ಲಿ ೫ ಕೃತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜುಲೈ 1ರಂದು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಪ್ರಕಾಶನವು ಹಮ್ಮಿಕೊಂಡಿರುವ ಕವಿ-ಕಾವ್ಯ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT