ತೀರ್ಥಹಳ್ಳಿ (ಶಿವಮೊಗ್ಗ): ಪಂಜಾಬಿನ ಹೆಸರಾಂತ ಸಾಹಿತಿಗಳಾದ ಅಜಿತ್ ಕೌರ್ ಮತ್ತುಗುರುಬಚನ್ ಸಿಂಗ್ ಭುಲ್ಲರ್ ಅವರನ್ನು ಪ್ರಸಕ್ತ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 5 ಲಕ್ಷ ಮತ್ತು ಬೆಳ್ಳಿ ಪದಕವನ್ನು ಒಳಗೊಂಡಿರುತ್ತದೆ ಎಂದು ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.