ಪ್ರತಿಯೊಬ್ಬರೂ ರೈತ ಹೋರಾಟದ ದೀಕ್ಷೆ ತೊಟ್ಟಿದ್ದೇವೆ. 15 ದಿನಗಳಿಂದ ನಿರಂತರವಾಗಿ ಸಿದ್ಧತೆ ನಡೆದಿದೆ. ಹಳ್ಳಿಹಳ್ಳಿಗಳಿಗೆ ತೆರಳಿ ಪ್ರವಾಸ ಮಾಡಿದ್ದೇವೆ. ಎಲ್ಲಾ ಕಡೆಯಿಂದಲೂ ನಿರೀಕ್ಷೆ ಮೀರಿ ಬೆಂಬಲ ಸಿಗುತ್ತಿದೆ. ಎಲ್ಲ ಸಮುದಾಯಗಳೂ ಜಾತಿ, ಪಕ್ಷ ಭೇದ ಮರೆತು ಬೆಂಬಲ ನೀಡಿವೆ. ಅಂದು ಮಧ್ಯಾಹ್ನ 3ಕ್ಕೆ ನಡೆಯುವ ಸಮಾವೇಶಕ್ಕೆ ಸಾಗರೋಪಾದಿಯಲ್ಲಿ ಜನರು ಬರುತ್ತಾರೆ. ಐತಿಹಾಸಿಕ ಸಮ್ಮೇಳನವಾಗಿ ದಾಖಲಾಗುತ್ತದೆ ಎಂದು ಮುಖಂಡರಾದ ಕೆ.ಟಿ.ಗಂಗಾಧರ್, ಎಚ್.ಆರ್.ಬಸವರಾಜಪ್ಪ, ಕೆ.ಪಿ.ಶ್ರೀಪಾಲ್, ಕೆ.ಎಲ್.ಅಶೋಕ್, ಎಂ.ಗುರುಮೂರ್ತಿ, ಎನ್.ರಮೇಶ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.