<p><strong>ಶಿವಮೊಗ್ಗ:</strong> ‘ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ಪ್ರಜಾಪ್ರಭುತ್ವದ ಪ್ರಥಮ ಮಾದರಿ ಎನಿಸಿದ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾದ ಅಲ್ಲಮಪ್ರಭುದೇವರು ಕನ್ನಡದ ಅನುಭಾವ ಪರಂಪರೆಗೆ ಹೊಸ ಮೌಲ್ಯಗಳನ್ನು ಕೊಟ್ಟವರು’ ಎಂದು ಚಿಕ್ಕಮಗಳೂರಿನ ಬಸವತತ್ವ ಪೀಠದ ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು.</p>.<p>ಬಸವಪರ ಸಂಘಟನೆಗಳು ಗುರುವಾರ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಲ್ಲಮಪ್ರಭುದೇವರ ಜಯಂತಿ ಸಾನ್ನಿಧ್ಯವಹಿಸಿ ಅವರು ಅಶೀರ್ವಚನ ನೀಡಿದರು.</p>.<p>ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ, ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ ಅಲ್ಲಮ ಪ್ರಭುಗಳು, ದೇಶ ಸಂಚಾರ ಮಾಡಿ ಸಾಮಾನ್ಯನಿಂದ ಸಾಧಕನವರೆಗೂ- ಎಲ್ಲರ ಸಾಧನೆಯ ಓರೆಕೋರೆಗಳನ್ನು ತಿದ್ದಿ ಸರಿದಾರಿಗೆ ಕಳಿಸಿದ ಮಹಾನುಭಾವಿ ಎಂದರು. ಕನ್ನಡ ಸಾಹಿತ್ಯಕ್ಕೆ ಮೌಲಿಕ ಕೊಡುಗೆ ನೀಡಿದ ಅಲ್ಲಮಪ್ರಭುಗಳ ವಚನಗಳ ಮೌಲ್ಯಗಳು ನಮಗೆಲ್ಲ ಪ್ರೇರಣೆಯಾಗಿವೆ ಎಂದರು.</p>.<p>ಸಾನಿಧ್ಯ ವಹಿಸಿದ್ದ ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ಅಲ್ಲಮಪ್ರಭುದೇವರ ಬಯಲ ತತ್ವವು ಕನ್ನಡದ ಆಧ್ಯಾತ್ಮ ಪರಂಪರೆಯ ಅಪರೂಪದ ಪರಿಕಲ್ಪನೆಯಾಗಿದೆ. ಮುಕ್ತಾಯಕ್ಕನಿಂದ ಗೋರಕ್ಷನವರೆಗೂ ಅಲ್ಲಮಗಳ ಮುಖಾಮುಖಿಯಾದ ಪ್ರತಿಯೊಬ್ಬರೂ ಬಯಲ ಸಿದ್ಧಿ ಸಾಧಿಸಿದ್ದಾರೆ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್. ಮಹಾರುದ್ರ, ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್, ವೀರಶೈವ- ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ಈ ಸಂದರ್ಭದಲ್ಲಿ ಇದ್ದರು. </p>.<p>Quote - ಬಯಲಾಗುವುದು ಪ್ರತಿಯೊಬ್ಬ ಮಾನವನಿಗೂ ಸಾಧ್ಯ. ತಾನು ಬದುಕಿನ ಯಾವುದೇ ಸ್ಥಿತಿಯಲ್ಲಿದ್ದರೂ ಬಯಲಿನೆಡೆಗೆ ಸಾಗುವ ಸುಲಭ ಮಾರ್ಗ ತೋರಿದ್ದು ಅಲ್ಲಮಪ್ರಭು ದೇವರು. ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಬೆಕ್ಕಿನಕಲ್ಮಠ ಶಿವಮೊಗ್ಗ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ‘ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ, ಪ್ರಜಾಪ್ರಭುತ್ವದ ಪ್ರಥಮ ಮಾದರಿ ಎನಿಸಿದ ಅನುಭವ ಮಂಟಪದ ಪ್ರಥಮ ಅಧ್ಯಕ್ಷರಾದ ಅಲ್ಲಮಪ್ರಭುದೇವರು ಕನ್ನಡದ ಅನುಭಾವ ಪರಂಪರೆಗೆ ಹೊಸ ಮೌಲ್ಯಗಳನ್ನು ಕೊಟ್ಟವರು’ ಎಂದು ಚಿಕ್ಕಮಗಳೂರಿನ ಬಸವತತ್ವ ಪೀಠದ ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು.</p>.<p>ಬಸವಪರ ಸಂಘಟನೆಗಳು ಗುರುವಾರ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಹಮ್ಮಿಕೊಂಡಿದ್ದ ಅಲ್ಲಮಪ್ರಭುದೇವರ ಜಯಂತಿ ಸಾನ್ನಿಧ್ಯವಹಿಸಿ ಅವರು ಅಶೀರ್ವಚನ ನೀಡಿದರು.</p>.<p>ವಿಶ್ವಗುರು ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ, ಶೂನ್ಯಸಿಂಹಾಸನದ ಪ್ರಥಮ ಅಧ್ಯಕ್ಷರಾದ ಅಲ್ಲಮ ಪ್ರಭುಗಳು, ದೇಶ ಸಂಚಾರ ಮಾಡಿ ಸಾಮಾನ್ಯನಿಂದ ಸಾಧಕನವರೆಗೂ- ಎಲ್ಲರ ಸಾಧನೆಯ ಓರೆಕೋರೆಗಳನ್ನು ತಿದ್ದಿ ಸರಿದಾರಿಗೆ ಕಳಿಸಿದ ಮಹಾನುಭಾವಿ ಎಂದರು. ಕನ್ನಡ ಸಾಹಿತ್ಯಕ್ಕೆ ಮೌಲಿಕ ಕೊಡುಗೆ ನೀಡಿದ ಅಲ್ಲಮಪ್ರಭುಗಳ ವಚನಗಳ ಮೌಲ್ಯಗಳು ನಮಗೆಲ್ಲ ಪ್ರೇರಣೆಯಾಗಿವೆ ಎಂದರು.</p>.<p>ಸಾನಿಧ್ಯ ವಹಿಸಿದ್ದ ಬೆಕ್ಕಿನಕಲ್ಮಠದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ಅಲ್ಲಮಪ್ರಭುದೇವರ ಬಯಲ ತತ್ವವು ಕನ್ನಡದ ಆಧ್ಯಾತ್ಮ ಪರಂಪರೆಯ ಅಪರೂಪದ ಪರಿಕಲ್ಪನೆಯಾಗಿದೆ. ಮುಕ್ತಾಯಕ್ಕನಿಂದ ಗೋರಕ್ಷನವರೆಗೂ ಅಲ್ಲಮಗಳ ಮುಖಾಮುಖಿಯಾದ ಪ್ರತಿಯೊಬ್ಬರೂ ಬಯಲ ಸಿದ್ಧಿ ಸಾಧಿಸಿದ್ದಾರೆ ಎಂದು ಹೇಳಿದರು.</p>.<p>ವಿಧಾನಪರಿಷತ್ ಸದಸ್ಯ ಡಾ.ಧನಂಜಯ ಸರ್ಜಿ, ಕಾಂಗ್ರೆಸ್ ಮುಖಂಡ ಎಚ್.ಸಿ.ಯೋಗೀಶ್, ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎನ್. ಮಹಾರುದ್ರ, ಪ್ರಧಾನ ಕಾರ್ಯದರ್ಶಿ ಬಾರಂದೂರು ಪ್ರಕಾಶ್, ವೀರಶೈವ- ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಮುನಿ ಸಜ್ಜನ್ ಈ ಸಂದರ್ಭದಲ್ಲಿ ಇದ್ದರು. </p>.<p>Quote - ಬಯಲಾಗುವುದು ಪ್ರತಿಯೊಬ್ಬ ಮಾನವನಿಗೂ ಸಾಧ್ಯ. ತಾನು ಬದುಕಿನ ಯಾವುದೇ ಸ್ಥಿತಿಯಲ್ಲಿದ್ದರೂ ಬಯಲಿನೆಡೆಗೆ ಸಾಗುವ ಸುಲಭ ಮಾರ್ಗ ತೋರಿದ್ದು ಅಲ್ಲಮಪ್ರಭು ದೇವರು. ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಬೆಕ್ಕಿನಕಲ್ಮಠ ಶಿವಮೊಗ್ಗ </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>