ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಾಲಕ್ಕೆ ಸಿಗದ ಆಂಬುಲೆನ್ಸ್‌: ಮಣಕನಮಠದ ವ್ಯಕ್ತಿ ಸಾವು

Last Updated 13 ಏಪ್ರಿಲ್ 2022, 4:45 IST
ಅಕ್ಷರ ಗಾತ್ರ

ತುಮರಿ: ಆಂಬುಲೆನ್ಸ್‌ ಸಕಾಲಕ್ಕೆ ಸಿಗದಿರುವುದರಿಂದ ಬೇರಾಳ ಸಮೀಪದ ಮಣಕನಮಠದ ಡಾಕಪ್ಪ ಜೈನ್ (55) ಮೃತಪಟ್ಟಿದ್ದಾರೆ.

ಡಾಕಪ್ಪ ಜೈನ್ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್‌ ಸಿಗಲಿಲ್ಲ. ಹೊಸನಗರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಲಾಗಿದ್ದ ಆಂಬುಲೆನ್ಸ್‌ 3 ಗಂಟೆ ತಡವಾಗಿ ಬಂತು. ಅಷ್ಟು ಹೊತ್ತಿಗೆ ಡಾಕಪ್ಪ ಜೈನ್ ನಿಧನರಾಗಿದ್ದರು.

ಇಲ್ಲಿನ ದ್ವೀಪದ ತುಮರಿ ಪ್ರಾಥಮಿಕ ಆರೋಗ್ಯ ಘಟಕಕ್ಕೆ ನೀಡಲಾಗಿದ್ದ ಆಂಬುಲೆನ್ಸ್‌ಗೆ ಎರಡು ದಿನಗಳ ಹಿಂದೆ ಚಾಲನೆ ನೀಡಲಾಗಿದ್ದು, ಸೋಮವಾರ ಅಪಘಾತವಾಗಿದ್ದರಿಂದ ರಿಪೇರಿ ಮಾಡಿಸಲೆಂದು ಅದನ್ನು ಕಳುಹಿಸಲಾಗಿತ್ತು.

ಧ್ವೀಪದ ತುಮರಿ ಬ್ಯಾಕೋಡಿನಲ್ಲಿ ಪುನಃ ಆಂಬುಲೆನ್ಸ್‌ ಸೇವೆಯಲ್ಲಿ ಅವ್ಯವಸ್ಥೆ ಉಂಟಾಗಿರುವ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದು ಆರೋಪಿಸಿದ್ದಾರೆ.

ತುಮರಿ ಆರೋಗ್ಯ ಕೇಂದ್ರಕ್ಕೆ ಇದೀಗ ತಾತ್ಕಾಲಿಕವಾಗಿ ವೆಂಟಿಲೇಟರ್ ಇರುವ ಆಂಬುಲೆನ್ಸ್‌ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT