<p>ಆನಂದಪುರ: ಸಮೀಪದ ಹೊಸಗುಂದ ತಿರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತವಾಗಿ ಅಣ್ಣ– ತಂಗಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ.</p>.<p>ಅವರು ಶಿವಮೊಗ್ಗದವರಾಗಿದ್ದು, ಸಿಗಂದೂರು ದೇವಸ್ಥಾನದಲ್ಲಿ ಪೂಜೆ ಮುಗಿಸಿ ಶಿವಮೊಗ್ಗದ ಕಡೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಹೊಸಗುಂದದ ತಿರುವಿನಲ್ಲಿ ಬೈಕ್ ಅಪಘಾತವಾಗಿದೆ.</p>.<p>ಸಾಗರದಿಂದ ಅದೇ ಮಾರ್ಗವಾಗಿ ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೈಕ್ ಅಪಘಾತವಾಗಿರುವುದನ್ನು ಗಮನಿಸಿ ವಾಹನವನ್ನು ನಿಲ್ಲಿಸಿ ಅಪಘಾತದ ಬಗ್ಗೆ ಮಾಹಿತಿ ಪಡೆದು ನೆರವು ನೀಡಿದರು.</p>.<p>ಆಂಬುಲೆನ್ಸ್ ಬರುವುದು ತಡವಾಗುತ್ತದೆ ಎನ್ನುವ ಕಾರಣಕೆಕ, ತಮ್ಮ ವಾಹನದಲ್ಲೇ ಸಾಗರದ ಆಸ್ಪತ್ರೆಗೆ ಕಳುಹಿಸಿಕೊಟ್ಟು, ವೈದ್ಯರಿಗೆ ಕರೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.</p>.<p>ಜಿಲ್ಲಾ ಮಾಜಿ ಪಂಚಾಯಿತಿ ಸದಸ್ಯೆ ಅನಿತಾ ಕುಮಾರಿ, ಕಲಸೆ ಚಂದ್ರಪ್ಪ, ಸೋಮಶೇಖರ್ ಲ್ಯಾವಿಗೆರೆ, ಚೇತನ್ ರಾಜ್ ಕಣ್ಣೂರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನಂದಪುರ: ಸಮೀಪದ ಹೊಸಗುಂದ ತಿರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತವಾಗಿ ಅಣ್ಣ– ತಂಗಿಗೆ ಸಣ್ಣ ಪುಟ್ಟ ಗಾಯಾಗಳಾಗಿವೆ.</p>.<p>ಅವರು ಶಿವಮೊಗ್ಗದವರಾಗಿದ್ದು, ಸಿಗಂದೂರು ದೇವಸ್ಥಾನದಲ್ಲಿ ಪೂಜೆ ಮುಗಿಸಿ ಶಿವಮೊಗ್ಗದ ಕಡೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಹೊಸಗುಂದದ ತಿರುವಿನಲ್ಲಿ ಬೈಕ್ ಅಪಘಾತವಾಗಿದೆ.</p>.<p>ಸಾಗರದಿಂದ ಅದೇ ಮಾರ್ಗವಾಗಿ ವಿಧಾನ ಪರಿಷತ್ ಚುನಾವಣಾ ಪ್ರಚಾರಕ್ಕಾಗಿ ತೆರಳುತ್ತಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೈಕ್ ಅಪಘಾತವಾಗಿರುವುದನ್ನು ಗಮನಿಸಿ ವಾಹನವನ್ನು ನಿಲ್ಲಿಸಿ ಅಪಘಾತದ ಬಗ್ಗೆ ಮಾಹಿತಿ ಪಡೆದು ನೆರವು ನೀಡಿದರು.</p>.<p>ಆಂಬುಲೆನ್ಸ್ ಬರುವುದು ತಡವಾಗುತ್ತದೆ ಎನ್ನುವ ಕಾರಣಕೆಕ, ತಮ್ಮ ವಾಹನದಲ್ಲೇ ಸಾಗರದ ಆಸ್ಪತ್ರೆಗೆ ಕಳುಹಿಸಿಕೊಟ್ಟು, ವೈದ್ಯರಿಗೆ ಕರೆ ಮಾಡಿ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದರು.</p>.<p>ಜಿಲ್ಲಾ ಮಾಜಿ ಪಂಚಾಯಿತಿ ಸದಸ್ಯೆ ಅನಿತಾ ಕುಮಾರಿ, ಕಲಸೆ ಚಂದ್ರಪ್ಪ, ಸೋಮಶೇಖರ್ ಲ್ಯಾವಿಗೆರೆ, ಚೇತನ್ ರಾಜ್ ಕಣ್ಣೂರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>