<p><strong>ಆನವಟ್ಟಿ:</strong> ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರದ (ಸಂತೆ ಮಾರುಕಟ್ಟೆ) ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಇಲಾಖೆಯ ಅಧಿಕಾರಿಗಳು ಬಾಡಿಗೆ ಕಟ್ಟಡಕ್ಕೆ ಅಂಗನಾವಾಡಿಯನ್ನು ಸ್ಥಳಾಂತರ ಮಾಡಿಸಿದ್ದು, ಆ ಜಾಗ ಕಲಿಕೆಗೆ ಸೂಕ್ತವಾಗಿಲ್ಲ ಎಂಬುದು ಪಾಲಕರ ಆರೋಪವಾಗಿದೆ.</p>.<p>ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿರುವ ಸ್ಥಳದಲ್ಲಿ ವಾರಕ್ಕೊಮ್ಮೆ ಸಂತೆ ನಡೆಯುತ್ತದೆ. ಪಕ್ಕದಲ್ಲೇ ಮೀನು ಮಾರುಕಟ್ಟೆ ಇರುವುದರಿಂದ, ನಿತ್ಯ ದುರ್ನಾತದ ನಡುವೆಯೇ ವಿದ್ಯಾರ್ಥಿಗಳು ಓಡಾಡಬೇಕಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದು ಸರಿಯಲ್ಲ ಎಂಬುದು ಪಾಲಕರ ನಆರೋಪವಾಗಿದೆ.</p>.<p>ಅಂಗನವಾಡಿ ಎದುರು ಚಿತ್ರಮಂದಿರವೂ ಇದ್ದು, ಈ ರಸ್ತೆಯಲ್ಲಿ ವಾಹನಗಳ ಸಂಚಾರ ಅಧಿಕವಾಗಿದೆ. ಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ಅವರು ಆಂತಕ ವ್ಯಕ್ತಪಡಿಸಿದ್ದಾರೆ.</p>.<p>‘ಕಿರಿದಾದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿದೆ. ಕಲಿಕೆಗೆ ಕಟ್ಟಡ ಸೂಕ್ತವಾಗಿಲ್ಲ. ವಿದ್ಯಾರ್ಥಿಗಳಿಗೆ ಕಲಿಯಲು ಮತ್ತು ಆಟವಾಡಲು ಜಾಗವಿರುವಂತೆ ಇಲಾಖೆಯ ಅಧಿಕಾರಿಗಳು ನಿವೇಶನ ಗುರುತಿಸಿ ಅಂಗನವಾಡಿಯ ನೂತನ ಕಟ್ಟಡ ಮಂಜೂರು ಮಾಡಬೇಕು’ ಎಂದು ವ್ಯಾಪಾರಿ ಎಂ. ಮಂಜುನಾಥ ಕೋರುತ್ತಾರೆ.</p>.<p>ಅಂಗನವಾಡಿಯ ಹಳೆ ಕಟ್ಟಡದ ನೆಲಹಾಸು, ಬಾಗಿಲು ಹಾಳಾಗಿವೆ. ಹೆಂಚುಗಳು ಒಡೆದು ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಅಂತೆಯೇ ಹಳೆಯ ಕಟ್ಟಡ ನೆಲಸಮ ಮಾಡಿ, ಹೊಸ ಕಟ್ಟಡ ನಿರ್ಮಾಣ ಆಗುವವರೆಗೆ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತರು ಹೇಳುತ್ತಾರೆ.</p>.<p>ಶಾಂತಿನಗರದಲ್ಲಿ ನಿರ್ಮಾಣವಾಗಿರುವ ನೂತನ ಲೇಔಟ್ನಲ್ಲಿ ಸಾರ್ವಜನಿಕ ಉಪಯೋಗಕ್ಕೆ ಜಾಗ ಬಿಡಲಾಗಿದೆ. ಅಲ್ಲಿಯೇ ಹೊಸ ಕಟ್ಟಡ ನಿರ್ಮಿಸಬೇಕೆಂದು ಪಾಲಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><blockquote>ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಮಕ್ಕಳ ಸುರಕ್ಷತೆಯಿಂದ ಸೂಕ್ತ ಸ್ಥಳವಲ್ಲ. ಇಲಾಖೆಯ ಅಧಿಕಾರಿಗಳು ಕೂಡಲೇ ನೂತನ ಅಂಗನವಾಡಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು <br></blockquote><span class="attribution">ಶಾಂತಪ್ಪ, ಸ್ಥಳೀಯರು</span></div>.<div><blockquote>ಅಂಗನವಾಡಿಗೆ ನಿವೇಶನ ಒದಗಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಕೇಳಿಕೊಂಡಿದ್ದೇವೆ. ನಿವೇಶನ ಒದಗಿಸಿದ ಕೂಡಲೇ ನೂತನ ಕಟ್ಟಡ ಮಂಜೂರು ಮಾಡಲು ಇಲಾಖೆಗೆ ಶಿಫಾರಸು ಮಾಡಲಾಗುವುದು </blockquote><span class="attribution">ಸೋಮಶೇಖರ್, ಶಿಶು ಅಭಿವೃಧಿ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನವಟ್ಟಿ:</strong> ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಶಾಂತಿನಗರದ (ಸಂತೆ ಮಾರುಕಟ್ಟೆ) ಅಂಗನವಾಡಿ ಕಟ್ಟಡ ಶಿಥಿಲಾವಸ್ಥೆ ತಲುಪಿದ್ದು, ಇಲಾಖೆಯ ಅಧಿಕಾರಿಗಳು ಬಾಡಿಗೆ ಕಟ್ಟಡಕ್ಕೆ ಅಂಗನಾವಾಡಿಯನ್ನು ಸ್ಥಳಾಂತರ ಮಾಡಿಸಿದ್ದು, ಆ ಜಾಗ ಕಲಿಕೆಗೆ ಸೂಕ್ತವಾಗಿಲ್ಲ ಎಂಬುದು ಪಾಲಕರ ಆರೋಪವಾಗಿದೆ.</p>.<p>ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿರುವ ಸ್ಥಳದಲ್ಲಿ ವಾರಕ್ಕೊಮ್ಮೆ ಸಂತೆ ನಡೆಯುತ್ತದೆ. ಪಕ್ಕದಲ್ಲೇ ಮೀನು ಮಾರುಕಟ್ಟೆ ಇರುವುದರಿಂದ, ನಿತ್ಯ ದುರ್ನಾತದ ನಡುವೆಯೇ ವಿದ್ಯಾರ್ಥಿಗಳು ಓಡಾಡಬೇಕಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಇದು ಸರಿಯಲ್ಲ ಎಂಬುದು ಪಾಲಕರ ನಆರೋಪವಾಗಿದೆ.</p>.<p>ಅಂಗನವಾಡಿ ಎದುರು ಚಿತ್ರಮಂದಿರವೂ ಇದ್ದು, ಈ ರಸ್ತೆಯಲ್ಲಿ ವಾಹನಗಳ ಸಂಚಾರ ಅಧಿಕವಾಗಿದೆ. ಮಕ್ಕಳ ಸುರಕ್ಷತೆ ಬಗ್ಗೆ ಪಾಲಕರು ಅವರು ಆಂತಕ ವ್ಯಕ್ತಪಡಿಸಿದ್ದಾರೆ.</p>.<p>‘ಕಿರಿದಾದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿದೆ. ಕಲಿಕೆಗೆ ಕಟ್ಟಡ ಸೂಕ್ತವಾಗಿಲ್ಲ. ವಿದ್ಯಾರ್ಥಿಗಳಿಗೆ ಕಲಿಯಲು ಮತ್ತು ಆಟವಾಡಲು ಜಾಗವಿರುವಂತೆ ಇಲಾಖೆಯ ಅಧಿಕಾರಿಗಳು ನಿವೇಶನ ಗುರುತಿಸಿ ಅಂಗನವಾಡಿಯ ನೂತನ ಕಟ್ಟಡ ಮಂಜೂರು ಮಾಡಬೇಕು’ ಎಂದು ವ್ಯಾಪಾರಿ ಎಂ. ಮಂಜುನಾಥ ಕೋರುತ್ತಾರೆ.</p>.<p>ಅಂಗನವಾಡಿಯ ಹಳೆ ಕಟ್ಟಡದ ನೆಲಹಾಸು, ಬಾಗಿಲು ಹಾಳಾಗಿವೆ. ಹೆಂಚುಗಳು ಒಡೆದು ಮಳೆಗಾಲದಲ್ಲಿ ಕಟ್ಟಡ ಸೋರುತ್ತದೆ. ಅಂತೆಯೇ ಹಳೆಯ ಕಟ್ಟಡ ನೆಲಸಮ ಮಾಡಿ, ಹೊಸ ಕಟ್ಟಡ ನಿರ್ಮಾಣ ಆಗುವವರೆಗೆ ಬಾಡಿಗೆ ಮನೆಯಲ್ಲಿ ಅಂಗನವಾಡಿ ನಡೆಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ ಎಂದು ಅಂಗನವಾಡಿ ಕಾರ್ಯಕರ್ತರು ಹೇಳುತ್ತಾರೆ.</p>.<p>ಶಾಂತಿನಗರದಲ್ಲಿ ನಿರ್ಮಾಣವಾಗಿರುವ ನೂತನ ಲೇಔಟ್ನಲ್ಲಿ ಸಾರ್ವಜನಿಕ ಉಪಯೋಗಕ್ಕೆ ಜಾಗ ಬಿಡಲಾಗಿದೆ. ಅಲ್ಲಿಯೇ ಹೊಸ ಕಟ್ಟಡ ನಿರ್ಮಿಸಬೇಕೆಂದು ಪಾಲಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.</p>.<div><blockquote>ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಅಂಗನವಾಡಿ ಮಕ್ಕಳ ಸುರಕ್ಷತೆಯಿಂದ ಸೂಕ್ತ ಸ್ಥಳವಲ್ಲ. ಇಲಾಖೆಯ ಅಧಿಕಾರಿಗಳು ಕೂಡಲೇ ನೂತನ ಅಂಗನವಾಡಿ ನಿರ್ಮಿಸಲು ಕ್ರಮ ಕೈಗೊಳ್ಳಬೇಕು <br></blockquote><span class="attribution">ಶಾಂತಪ್ಪ, ಸ್ಥಳೀಯರು</span></div>.<div><blockquote>ಅಂಗನವಾಡಿಗೆ ನಿವೇಶನ ಒದಗಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಕೇಳಿಕೊಂಡಿದ್ದೇವೆ. ನಿವೇಶನ ಒದಗಿಸಿದ ಕೂಡಲೇ ನೂತನ ಕಟ್ಟಡ ಮಂಜೂರು ಮಾಡಲು ಇಲಾಖೆಗೆ ಶಿಫಾರಸು ಮಾಡಲಾಗುವುದು </blockquote><span class="attribution">ಸೋಮಶೇಖರ್, ಶಿಶು ಅಭಿವೃಧಿ ಅಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>