<p><strong>ಶಿವಮೊಗ್ಗ: </strong>ಶರಾವತಿ ನಗರದಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ವೈಜ್ಞಾನಿಕವಾಗಿದೆಎಂದುಅಣ್ಣಾ ಹಜಾರೆ ಹೋರಾಟ ಸಮಿತಿಅಧ್ಯಕ್ಷ ಅಶೋಕ್ ಯಾದವ್ ಆರೋಪಿಸಿದರು.</p>.<p>ಶರಾವತಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಕಾಮಗಾರಿಗಳು ಕಳಪೆಯಾವೆ. ರಸ್ತೆ ಅಗೆದು ಯುಜಿಡಿ ಅಳವಡಿಸುವಾಗ ಯಾವುದೇ ನಿಯಮ ಪಾಲಿಸಿಲ್ಲ. 3 ಮೀಟರ್ ಆಳದಲ್ಲಿ ಕೇಬಲ್ ಅಳವಡಿಸಬೇಕಿತ್ತು. ಆದರೆ, ಕೇವಲ1 ಅಡಿ ಆಳದಲ್ಲಿ ಕೇಬಲ್ ಅಳವಡಿಸಲಾಗುತ್ತಿದೆ.ದಿನದ 24ಗಂಟೆಗಳೂ ನೀರಿನ ಸಂಪರ್ಕಕಲ್ಪಿಸುವ ಪೈಪ್ಗಳನ್ನೂ 1ಮೀಟರ್ ಆಳದಲ್ಲಿ ಅಳವಡಿಸಬೇಕಿತ್ತು. 1 ಅಡಿ ಆಳದಲ್ಲಿ ಅಳವಡಿಸಲಾಗಿದೆ. ಇದು ಭವಿಷ್ಯದಲ್ಲಿ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂದುದೂರಿದರು.</p>.<p>ನಿಗಾ ವಹಿಸದೇ ಅಧಿಕಾರಿಗಳುನಿರ್ಲಕ್ಷ್ಯ ಮಾಡುತ್ತಿದ್ದಾರೆ. ಕಾಮಗಾರಿಗಳತ್ತ ಗಮನಹರಿಸಬೇಕು. ನಗರದ ಎಲ್ಲಡೆ ಇಂತಹಅವೈಜ್ಞಾನಿಕ ಕಾಮಗಾರಿ ನಡೆಯುತ್ತಿವೆ.ಮೇಯರ್ ವಾರ್ಡ್ನಲ್ಲೇ ಕಳಪೆ ಕಾಮಗಾರಿ ನಡೆದರೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. ಮೇಯರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಶರಾವತಿ ನಗರದಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ವೈಜ್ಞಾನಿಕವಾಗಿದೆಎಂದುಅಣ್ಣಾ ಹಜಾರೆ ಹೋರಾಟ ಸಮಿತಿಅಧ್ಯಕ್ಷ ಅಶೋಕ್ ಯಾದವ್ ಆರೋಪಿಸಿದರು.</p>.<p>ಶರಾವತಿ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು.</p>.<p>ಕಾಮಗಾರಿಗಳು ಕಳಪೆಯಾವೆ. ರಸ್ತೆ ಅಗೆದು ಯುಜಿಡಿ ಅಳವಡಿಸುವಾಗ ಯಾವುದೇ ನಿಯಮ ಪಾಲಿಸಿಲ್ಲ. 3 ಮೀಟರ್ ಆಳದಲ್ಲಿ ಕೇಬಲ್ ಅಳವಡಿಸಬೇಕಿತ್ತು. ಆದರೆ, ಕೇವಲ1 ಅಡಿ ಆಳದಲ್ಲಿ ಕೇಬಲ್ ಅಳವಡಿಸಲಾಗುತ್ತಿದೆ.ದಿನದ 24ಗಂಟೆಗಳೂ ನೀರಿನ ಸಂಪರ್ಕಕಲ್ಪಿಸುವ ಪೈಪ್ಗಳನ್ನೂ 1ಮೀಟರ್ ಆಳದಲ್ಲಿ ಅಳವಡಿಸಬೇಕಿತ್ತು. 1 ಅಡಿ ಆಳದಲ್ಲಿ ಅಳವಡಿಸಲಾಗಿದೆ. ಇದು ಭವಿಷ್ಯದಲ್ಲಿ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂದುದೂರಿದರು.</p>.<p>ನಿಗಾ ವಹಿಸದೇ ಅಧಿಕಾರಿಗಳುನಿರ್ಲಕ್ಷ್ಯ ಮಾಡುತ್ತಿದ್ದಾರೆ. ಕಾಮಗಾರಿಗಳತ್ತ ಗಮನಹರಿಸಬೇಕು. ನಗರದ ಎಲ್ಲಡೆ ಇಂತಹಅವೈಜ್ಞಾನಿಕ ಕಾಮಗಾರಿ ನಡೆಯುತ್ತಿವೆ.ಮೇಯರ್ ವಾರ್ಡ್ನಲ್ಲೇ ಕಳಪೆ ಕಾಮಗಾರಿ ನಡೆದರೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡಿಲ್ಲ. ಮೇಯರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>