ಕೊರೊನಾ ಸಂದರ್ಭದಲ್ಲಿ 2021ರಲ್ಲಿ ₹ 50 ಕೋಟಿ ಹಾಗೂ ಪ್ರಸಕ್ತ ಸಾಲಿನಲ್ಲಿ ₹ 50 ಕೋಟಿ ಬಿಜೆಪಿ ಸರ್ಕಾರ ಅನುದಾನ ನೀಡಿದೆ. ಈ ಅನುದಾನದಲ್ಲಿ ಚರ್ಚ್ಗಳ ದುರಸ್ತಿ ಹಾಗೂ ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ ಸಂಘ, ಸಂಸ್ಥೆಗಳು ನಡೆಸುವ ವೃದ್ಧಾಶ್ರಮ ಹಾಗೂ ಅನಾಥಾಲಯಗಳಿಗೆ, ಸಮಾಜದ ವಿದ್ಯಾರ್ಥಿಗಳು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು, ಸ್ಮಶಾನಗಳ ಅಭಿವೃದ್ಧಿ ಸೇರಿ ಇತರೆ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.