<p><strong>ಸೊರಬ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸಮುದಾಯದ ಓಲೈಕೆಗಾಗಿ ಬಜೆಟ್ ಮಂಡಿಸಿದ್ದು, ಇತರ ಸಮುದಾಯಗಳ ಬಡವರನ್ನು ಕಡೆಗಣಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ದೂರಿದರು.</p>.<p>ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಿ ಜಾತ್ರೆ ನಿಮಿತ್ತ ನಡೆದ ರಥೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ನರೇಂದ್ರ ಮೋದಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ವರ್ಗದ ಜನರ ಒಳಿತನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಸಿದ್ಧಪಡಿಸಿದ್ದರು. ಆದರೆ, ರಾಜ್ಯ ಸರ್ಕಾರವು ಧರ್ಮ ಆಧಾರಿತ ಬಜೆಟ್ ಮಂಡಿಸುವ ಮೂಲಕ ಹಿಂದೂ ವಿರೋಧಿಯಾಗಿದೆ ಎಂದರು.</p>.<p>ಅಕ್ರಮ-ಸಕ್ರಮ ಯೋಜನೆ ಅಡಿ ಟಿಸಿ ಹಾಕಿಸಲು ಈ ಹಿಂದೆ ₹ 10,000 ಶುಲ್ಕು ಕಟ್ಟಬೇಕಿತ್ತು. ಆದರೆ, ಇಂದು ₹ 3 ಲಕ್ಷ ಕಟ್ಟಬೇಕಾದ ಸ್ಥಿತಿ ಇದೆ. ಆಸ್ತಿ ನೋಂದಣಿ ಶುಲ್ಕ, ಛಾಪಾ ಕಾಗದ ಸೇರಿದಂತೆ ಮೂಲ ಸೌಕರ್ಯಗಳ ಬೆಲೆ ನಾಲ್ಕು ಪಟ್ಟು ಹೆಚ್ಚಿಸಿರುವುದು ಖಂಡನೀಯ ಎಂದು ಹೇಳಿದರು.</p>.<p>ಬಜೆಟ್ನಲ್ಲಿ ಶಿವಮೊಗ್ಗ ಜಿಲ್ಲೆಗೆ ಯಾವುದೇ ಹೊಸ ಅನುದಾನ ನೀಡಿಲ್ಲ. ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾಗಿದ್ದ ಅನುದಾನವನ್ನು ಹಿಂಪಡೆಯಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಕುಗ್ಗಿಸುವ ಕೆಲಸ ಈ ಸರ್ಕಾರದಿಂದ ಆಗುತ್ತಿದೆ ಎಂದರು.</p>.<p>ನಿಗಮಗಳಿಂದ ಹಿಂದೆ 10-20 ಬೋರ್ವೆಲ್ಗಳನ್ನು ನೀಡಲಾಗುತ್ತಿತ್ತು. ಆದರೆ ಈಗ 1-2 ಬೋರ್ವೆಲ್ ಕೊಡಲು ಸಹ ಸರ್ಕಾರ ವಿಫಲವಾಗಿದೆ. ನಿಗಮಗಳನ್ನು, ವಿಶ್ವವಿದ್ಯಾಲಯಗಳನ್ನು ಕೇಂದ್ರೀಕೃತಗೊಳಿಸುವ ಮೂಲಕ ಮುಚ್ಚಲು ಹುನ್ನಾರ ನಡೆಸಿದೆ. ಆದಾಯ ಕಡಿಮೆ, ಖರ್ಚು ಹೆಚ್ಚಿರುವ ಆಡಳಿತದಿಂದ ರಾಜ್ಯದ ಆರ್ಥಿಕ ಸ್ಥಿತಿಗೆ ಭಾರಿ ಹಾನಿ ಉಂಟು ಮಾಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊರಬ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಸಮುದಾಯದ ಓಲೈಕೆಗಾಗಿ ಬಜೆಟ್ ಮಂಡಿಸಿದ್ದು, ಇತರ ಸಮುದಾಯಗಳ ಬಡವರನ್ನು ಕಡೆಗಣಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ದೂರಿದರು.</p>.<p>ತಾಲ್ಲೂಕಿನ ಚಂದ್ರಗುತ್ತಿ ರೇಣುಕಾಂಬಾ ದೇವಿ ಜಾತ್ರೆ ನಿಮಿತ್ತ ನಡೆದ ರಥೋತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ನರೇಂದ್ರ ಮೋದಿ ಹಾಗೂ ಬಿ.ಎಸ್.ಯಡಿಯೂರಪ್ಪ ಅವರು ಎಲ್ಲಾ ವರ್ಗದ ಜನರ ಒಳಿತನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್ ಸಿದ್ಧಪಡಿಸಿದ್ದರು. ಆದರೆ, ರಾಜ್ಯ ಸರ್ಕಾರವು ಧರ್ಮ ಆಧಾರಿತ ಬಜೆಟ್ ಮಂಡಿಸುವ ಮೂಲಕ ಹಿಂದೂ ವಿರೋಧಿಯಾಗಿದೆ ಎಂದರು.</p>.<p>ಅಕ್ರಮ-ಸಕ್ರಮ ಯೋಜನೆ ಅಡಿ ಟಿಸಿ ಹಾಕಿಸಲು ಈ ಹಿಂದೆ ₹ 10,000 ಶುಲ್ಕು ಕಟ್ಟಬೇಕಿತ್ತು. ಆದರೆ, ಇಂದು ₹ 3 ಲಕ್ಷ ಕಟ್ಟಬೇಕಾದ ಸ್ಥಿತಿ ಇದೆ. ಆಸ್ತಿ ನೋಂದಣಿ ಶುಲ್ಕ, ಛಾಪಾ ಕಾಗದ ಸೇರಿದಂತೆ ಮೂಲ ಸೌಕರ್ಯಗಳ ಬೆಲೆ ನಾಲ್ಕು ಪಟ್ಟು ಹೆಚ್ಚಿಸಿರುವುದು ಖಂಡನೀಯ ಎಂದು ಹೇಳಿದರು.</p>.<p>ಬಜೆಟ್ನಲ್ಲಿ ಶಿವಮೊಗ್ಗ ಜಿಲ್ಲೆಗೆ ಯಾವುದೇ ಹೊಸ ಅನುದಾನ ನೀಡಿಲ್ಲ. ಪ್ರವಾಸೋದ್ಯಮ ಇಲಾಖೆಯಿಂದ ಮಂಜೂರಾಗಿದ್ದ ಅನುದಾನವನ್ನು ಹಿಂಪಡೆಯಲಾಗಿದೆ. ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಕುಗ್ಗಿಸುವ ಕೆಲಸ ಈ ಸರ್ಕಾರದಿಂದ ಆಗುತ್ತಿದೆ ಎಂದರು.</p>.<p>ನಿಗಮಗಳಿಂದ ಹಿಂದೆ 10-20 ಬೋರ್ವೆಲ್ಗಳನ್ನು ನೀಡಲಾಗುತ್ತಿತ್ತು. ಆದರೆ ಈಗ 1-2 ಬೋರ್ವೆಲ್ ಕೊಡಲು ಸಹ ಸರ್ಕಾರ ವಿಫಲವಾಗಿದೆ. ನಿಗಮಗಳನ್ನು, ವಿಶ್ವವಿದ್ಯಾಲಯಗಳನ್ನು ಕೇಂದ್ರೀಕೃತಗೊಳಿಸುವ ಮೂಲಕ ಮುಚ್ಚಲು ಹುನ್ನಾರ ನಡೆಸಿದೆ. ಆದಾಯ ಕಡಿಮೆ, ಖರ್ಚು ಹೆಚ್ಚಿರುವ ಆಡಳಿತದಿಂದ ರಾಜ್ಯದ ಆರ್ಥಿಕ ಸ್ಥಿತಿಗೆ ಭಾರಿ ಹಾನಿ ಉಂಟು ಮಾಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>