<p><strong>ಸಾಗರ</strong>: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಸಮರ್ಪಕ ವಿತರಣೆಗೆ ಒತ್ತಾಯಿಸಿ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಪ್ರಮುಖರು ಶುಕ್ರವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘2024– 25ನೇ ಸಾಲಿನಲ್ಲಿ ಅಡಿಕೆ ಬೆಳೆಗಾರರಿಗೆ ಅವೈಜ್ಞಾನಿಕ ಮಾದರಿಯಲ್ಲಿ ಬೆಳೆ ವಿಮೆ ಪರಿಹಾರ ವಿತರಿಸಲಾಗಿದೆ. ಇದಕ್ಕೆ ಮಳೆಮಾಪನ ಕೇಂದ್ರಗಳು ಸುಸ್ಥಿತಿಯಲ್ಲಿ ಇಲ್ಲದೇ ಇರುವುದು ಕಾರಣವಾಗಿದೆ. ಈ ಹಂತದಲ್ಲಿ ಎಲ್ಲ ಮಳೆಮಾಪನ ಕೇಂದ್ರಗಳು ಸುಸ್ಥಿತಿಯಲ್ಲಿ ಇರುವಂತೆ ತಾಲ್ಲೂಕು ಆಡಳಿತ ನೋಡಿಕೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಮಳೆಮಾಪನ ಕೇಂದ್ರಗಳಲ್ಲಿ ಸರಿಯಾದ ರೀತಿಯಲ್ಲಿ ಮಳೆಯ ಪ್ರಮಾಣ ದಾಖಲಾಗುವಂತೆ ಸೂಕ್ತ ಸಿಬ್ಬಂದಿ ನೇಮಕ ಮಾಡಬೇಕು. ಬೆಳೆ ವಿಮೆ ವಿಷಯದಲ್ಲಿ ರೈತರಿಗೆ ಅನ್ಯಾಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.</p>.<p>ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ಕಾರ್ಯದರ್ಶಿ ರಾಜೇಂದ್ರ ಕೆ.ಎಸ್. ವೆಂಕಟರಾಮ್, ಶೇಷಗಿರಿ, ಕೃಷ್ಣಮೂರ್ತಿ ಹೊಸಬಾಳೆ, ನಾರಾಯಣ ಮೂರ್ತಿ ಕಾನುಗೋಡು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ</strong>: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರದ ಸಮರ್ಪಕ ವಿತರಣೆಗೆ ಒತ್ತಾಯಿಸಿ ಪ್ರಾಂತ್ಯ ಅಡಿಕೆ ಬೆಳೆಗಾರರ ಸಂಘದ ಪ್ರಮುಖರು ಶುಕ್ರವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದ್ದಾರೆ.</p>.<p>‘2024– 25ನೇ ಸಾಲಿನಲ್ಲಿ ಅಡಿಕೆ ಬೆಳೆಗಾರರಿಗೆ ಅವೈಜ್ಞಾನಿಕ ಮಾದರಿಯಲ್ಲಿ ಬೆಳೆ ವಿಮೆ ಪರಿಹಾರ ವಿತರಿಸಲಾಗಿದೆ. ಇದಕ್ಕೆ ಮಳೆಮಾಪನ ಕೇಂದ್ರಗಳು ಸುಸ್ಥಿತಿಯಲ್ಲಿ ಇಲ್ಲದೇ ಇರುವುದು ಕಾರಣವಾಗಿದೆ. ಈ ಹಂತದಲ್ಲಿ ಎಲ್ಲ ಮಳೆಮಾಪನ ಕೇಂದ್ರಗಳು ಸುಸ್ಥಿತಿಯಲ್ಲಿ ಇರುವಂತೆ ತಾಲ್ಲೂಕು ಆಡಳಿತ ನೋಡಿಕೊಳ್ಳಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಮಳೆಮಾಪನ ಕೇಂದ್ರಗಳಲ್ಲಿ ಸರಿಯಾದ ರೀತಿಯಲ್ಲಿ ಮಳೆಯ ಪ್ರಮಾಣ ದಾಖಲಾಗುವಂತೆ ಸೂಕ್ತ ಸಿಬ್ಬಂದಿ ನೇಮಕ ಮಾಡಬೇಕು. ಬೆಳೆ ವಿಮೆ ವಿಷಯದಲ್ಲಿ ರೈತರಿಗೆ ಅನ್ಯಾಯವಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.</p>.<p>ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ವ.ಶಂ.ರಾಮಚಂದ್ರ ಭಟ್, ಕಾರ್ಯದರ್ಶಿ ರಾಜೇಂದ್ರ ಕೆ.ಎಸ್. ವೆಂಕಟರಾಮ್, ಶೇಷಗಿರಿ, ಕೃಷ್ಣಮೂರ್ತಿ ಹೊಸಬಾಳೆ, ನಾರಾಯಣ ಮೂರ್ತಿ ಕಾನುಗೋಡು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>