ಗಮನ ಸೆಳೆಯುವ ಮ್ಯೂಸಿಯಂ ಮಾಲ್ಗುಡಿ:
ಕಲಾ ನಿರ್ದೇಶಕ ಜಾನ್ ದೇವರಾಜ್ ನೇತೃತ್ವದಲ್ಲಿ ನಿಲ್ದಾಣದ ಆವರಣದಲ್ಲೇ ‘ಮ್ಯೂಸಿಯಂ ಮಾಲ್ಗುಡಿ’ ಸಿದ್ಧಪಡಿಸಲಾಗಿದೆ. ಮಲೆನಾಡಿನ ಸಂಸ್ಕೃತಿ, ಪರಿಸರ, ಸಮಗ್ರತೆ, ಕೃಷಿ, ಬಳಕೆ ಸಾಮಗ್ರಿಗಳು, ಪ್ರಚೀನ ಕಲಾಕೃತಿಗಳನ್ನು ನೆಲೆಗೊಳಿಸಲಾಗಿದೆ. ಶಂಕರ್ನಾಗ್ ಪ್ರತಿಮೆ ಸ್ಥಾಪಿಸಲಾಗಿದೆ. ಮಾಲ್ಗುಡಿಯಲ್ಲಿ ಬರುವ ನಿಲ್ದಾಣದ ಒಂಟಿ ಮರ, ಪ್ಲಾಟ್ಫಾರಂ, ಕಲ್ಲು ಬೆಂಚುಗಳು, ನಿಲ್ದಾಣದ ಸಾಲು ಕಂಬಿಗಳಿಗೂ ಜೀವ ತುಂಬಲಾಗಿದೆ.