<p><strong>ಸಾಗರ:</strong> ‘ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕಿ ರೋಗ ಅಡಿಕೆ ಬೆಳೆಗಾರರ ಪಾಲಿಗೆ ಶಾಪವಾಗಿ ಪರಿಣಮಿಸಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ತಾಲ್ಲೂಕಿನ ಭಾನ್ಕುಳಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ, ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯ ಈಚೆಗೆ ಏರ್ಪಡಿಸಿದ್ದ ‘ಎಲೆಚುಕ್ಕಿ ರೋಗ ನಿಯಂತ್ರಣ ಮತ್ತು ನಿರ್ವಹಣೆ’ ಕುರಿತು ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ತಾಲ್ಲೂಕಿನ ಭಾರಂಗಿ ಹೋಬಳಿಯ ಗ್ರಾಮಗಳಲ್ಲಿ ಎಲೆಚುಕ್ಕಿ ರೋಗದ ಪ್ರಮಾಣ ಹೆಚ್ಚಿದ್ದು ಅಡಿಕೆ ತೋಟವೆ ನಾಶವಾಗುತ್ತಿವೆ. ಕೃಷಿ ವಿಜ್ಞಾನಿಗಳು ಈ ವಿಷಯವನ್ನು ಗಂಭೀರವಾಗಿ ಪರಿಣಮಿಸಿ ರೋಗ ವ್ಯಾಪಕವಾಗಿರುವ ತೋಟಗಳಿಗೆ ಖುದ್ದಾಗಿ ಭೇಟಿ ನೀಡಬೇಕು’ ಎಂದು ಅವರು ಸಲಹೆ ನೀಡಿದರು.</p>.<p>‘ಈಗಿರುವ ಔಷಧಿಗಳ ಮೂಲಕ ರೋಗವನ್ನು ಹೇಗೆ ನಿಯಂತ್ರಣಕ್ಕೆ ತರಬಹುದು ಎನ್ನುವ ಜೊತೆಗೆ ರೋಗ ಹರಡದಂತೆ ತಡೆಯುವ ನೂತನ ಔಷಧಿಗಳ ಸಂಶೋಧನೆಗೆ ಕೃಷಿ ವಿಜ್ಞಾನಿಗಳು ಮುಂದಾಗಬೇಕು’ ಎಂದರು.</p>.<p>ಇರುವಕ್ಕಿ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಕೃಷಿ ಇಲಾಖೆ ಅಧಿಕಾರಿ ಶಿವಪ್ರಕಾಶ್ ಬಿ.ಎಲ್. ಸೋಮರಾಜ್, ಕಲಸೆ ಚಂದ್ರಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ‘ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಎಲೆಚುಕ್ಕಿ ರೋಗ ಅಡಿಕೆ ಬೆಳೆಗಾರರ ಪಾಲಿಗೆ ಶಾಪವಾಗಿ ಪರಿಣಮಿಸಿದೆ’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.</p>.<p>ತಾಲ್ಲೂಕಿನ ಭಾನ್ಕುಳಿ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ, ಇರುವಕ್ಕಿಯ ಕೃಷಿ ವಿಶ್ವವಿದ್ಯಾಲಯ ಈಚೆಗೆ ಏರ್ಪಡಿಸಿದ್ದ ‘ಎಲೆಚುಕ್ಕಿ ರೋಗ ನಿಯಂತ್ರಣ ಮತ್ತು ನಿರ್ವಹಣೆ’ ಕುರಿತು ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿ ಮಾತನಾಡಿದರು.</p>.<p>‘ತಾಲ್ಲೂಕಿನ ಭಾರಂಗಿ ಹೋಬಳಿಯ ಗ್ರಾಮಗಳಲ್ಲಿ ಎಲೆಚುಕ್ಕಿ ರೋಗದ ಪ್ರಮಾಣ ಹೆಚ್ಚಿದ್ದು ಅಡಿಕೆ ತೋಟವೆ ನಾಶವಾಗುತ್ತಿವೆ. ಕೃಷಿ ವಿಜ್ಞಾನಿಗಳು ಈ ವಿಷಯವನ್ನು ಗಂಭೀರವಾಗಿ ಪರಿಣಮಿಸಿ ರೋಗ ವ್ಯಾಪಕವಾಗಿರುವ ತೋಟಗಳಿಗೆ ಖುದ್ದಾಗಿ ಭೇಟಿ ನೀಡಬೇಕು’ ಎಂದು ಅವರು ಸಲಹೆ ನೀಡಿದರು.</p>.<p>‘ಈಗಿರುವ ಔಷಧಿಗಳ ಮೂಲಕ ರೋಗವನ್ನು ಹೇಗೆ ನಿಯಂತ್ರಣಕ್ಕೆ ತರಬಹುದು ಎನ್ನುವ ಜೊತೆಗೆ ರೋಗ ಹರಡದಂತೆ ತಡೆಯುವ ನೂತನ ಔಷಧಿಗಳ ಸಂಶೋಧನೆಗೆ ಕೃಷಿ ವಿಜ್ಞಾನಿಗಳು ಮುಂದಾಗಬೇಕು’ ಎಂದರು.</p>.<p>ಇರುವಕ್ಕಿ ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಕೃಷಿ ಇಲಾಖೆ ಅಧಿಕಾರಿ ಶಿವಪ್ರಕಾಶ್ ಬಿ.ಎಲ್. ಸೋಮರಾಜ್, ಕಲಸೆ ಚಂದ್ರಪ್ಪ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>