<p>ತೀರ್ಥಹಳ್ಳಿ: ಮಲೆನಾಡಿನ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಎಲೆಚುಕ್ಕಿ, ಹಿಡಿಮುಂಡಿಗೆ, ಹಿಂಗಾರ ಒಣಗುವ ರೋಗಗಳಿಂದ ಕಂಗಾಲಾಗಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಇನ್ನಷ್ಟು ಭೀತಿ ಹೆಚ್ಚಿಸಿದೆ.</p>.<p>ತಾಲ್ಲೂಕಿನ ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. 3ರಿಂದ 4 ವರ್ಷಗಳ ಗಿಡಗಳು ಹುಳುಗಳ ಬಾಧೆಗೆ<br />ಒಣಗಿ ಬುಡ<br />ಮೇಲಾಗುತ್ತಿವೆ. ರೋಗ ತಗುಲಿರುವ ಸಸಿಗಳಲ್ಲಿ ಅಂಟಿನ ಅಂಶಗಳ ಮೂಲಕ ಗಮ್ ರೀತಿ ಕಾಣಿಸಿಕೊಳ್ಳುತ್ತದೆ. ಅಂಟಿನ ಅಂಶದ ಕೆಳಗೆ ರಂಧ್ರಗಳು ನಿರ್ಮಾಣವಾಗಿರುವುದನ್ನು ರೈತರು ಗುರುತಿಸಬೇಕು.</p>.<p>ಸ್ಥಳಕ್ಕೆ ತೋಟಗಾರಿಕೆ<br />ಇಲಾಖೆ, ಕೃಷಿ ಮತ್ತು ಸೀಬಿನಕೆರೆ ತೋಟಗಾರಿಕಾ ಸಂಶೋಧನಾ<br />ಕೇಂದ್ರದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಇದು ರಂಧ್ರ ಕೊರೆಯುವ ಹುಳು ಎಂದು ಗುರುತಿಸಲಾಗಿದೆ. ಸದ್ಯ ನಿಯಂತ್ರಣಕ್ಕೆ ಕ್ಲೋರೊಫಿರಫಸ್ 20ಇಸಿ - 3ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ<br />ಕಾಂಡಕ್ಕೆ ಉಪಚಾರ ಮಾಡುವ ಮೂಲಕ ನಿಯಂತ್ರಿಸಬಹುದು.<br />15 ದಿನಗಳ ನಂತರ ಇದೆ<br />ದ್ರಾವಣದಲ್ಲಿ ಬಟ್ಟೆಯನ್ನು ನೆನೆಸಿ ಕೀಟದಿಂದ ಭಾದೆಗೊಳಗಾದ ಅಡಿಕೆ ಕಾಂಡದ ಸುತ್ತಲು<br />ಕಟ್ಟಬೇಕು ಅಥವಾ ಹನಿಯಾಗಿರುವ ಕಾಂಡಗಳಿಗೆ ಔಷಧಿಯನ್ನು ಬಳಿಯಬೇಕು ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತೀರ್ಥಹಳ್ಳಿ: ಮಲೆನಾಡಿನ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಎಲೆಚುಕ್ಕಿ, ಹಿಡಿಮುಂಡಿಗೆ, ಹಿಂಗಾರ ಒಣಗುವ ರೋಗಗಳಿಂದ ಕಂಗಾಲಾಗಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಇನ್ನಷ್ಟು ಭೀತಿ ಹೆಚ್ಚಿಸಿದೆ.</p>.<p>ತಾಲ್ಲೂಕಿನ ತೂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ತೋಟಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. 3ರಿಂದ 4 ವರ್ಷಗಳ ಗಿಡಗಳು ಹುಳುಗಳ ಬಾಧೆಗೆ<br />ಒಣಗಿ ಬುಡ<br />ಮೇಲಾಗುತ್ತಿವೆ. ರೋಗ ತಗುಲಿರುವ ಸಸಿಗಳಲ್ಲಿ ಅಂಟಿನ ಅಂಶಗಳ ಮೂಲಕ ಗಮ್ ರೀತಿ ಕಾಣಿಸಿಕೊಳ್ಳುತ್ತದೆ. ಅಂಟಿನ ಅಂಶದ ಕೆಳಗೆ ರಂಧ್ರಗಳು ನಿರ್ಮಾಣವಾಗಿರುವುದನ್ನು ರೈತರು ಗುರುತಿಸಬೇಕು.</p>.<p>ಸ್ಥಳಕ್ಕೆ ತೋಟಗಾರಿಕೆ<br />ಇಲಾಖೆ, ಕೃಷಿ ಮತ್ತು ಸೀಬಿನಕೆರೆ ತೋಟಗಾರಿಕಾ ಸಂಶೋಧನಾ<br />ಕೇಂದ್ರದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕವಾಗಿ ಇದು ರಂಧ್ರ ಕೊರೆಯುವ ಹುಳು ಎಂದು ಗುರುತಿಸಲಾಗಿದೆ. ಸದ್ಯ ನಿಯಂತ್ರಣಕ್ಕೆ ಕ್ಲೋರೊಫಿರಫಸ್ 20ಇಸಿ - 3ಮಿ.ಲೀ ಪ್ರತಿ ಲೀಟರ್ ನೀರಿಗೆ ಬೆರೆಸಿ<br />ಕಾಂಡಕ್ಕೆ ಉಪಚಾರ ಮಾಡುವ ಮೂಲಕ ನಿಯಂತ್ರಿಸಬಹುದು.<br />15 ದಿನಗಳ ನಂತರ ಇದೆ<br />ದ್ರಾವಣದಲ್ಲಿ ಬಟ್ಟೆಯನ್ನು ನೆನೆಸಿ ಕೀಟದಿಂದ ಭಾದೆಗೊಳಗಾದ ಅಡಿಕೆ ಕಾಂಡದ ಸುತ್ತಲು<br />ಕಟ್ಟಬೇಕು ಅಥವಾ ಹನಿಯಾಗಿರುವ ಕಾಂಡಗಳಿಗೆ ಔಷಧಿಯನ್ನು ಬಳಿಯಬೇಕು ಎಂದು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>