ಸದಸ್ಯ ಡಿ.ದಿನೇಶ್ , ‘ನೀವು ಯಾವ 17 ಮಂದಿಯನ್ನು ಸಮಿತಿಗೆ ಸೇರಿಸಿಕೊಳ್ಳಲು ಹೊರಟಿದ್ದೀರೊ ಅವರು ನಿಮ್ಮ ಬಗ್ಗೆ ಕಳೆದ ಸಭೆಯಲ್ಲಿ ಹೀನಾಯವಾಗಿ ಮಾತನಾಡಿದ್ದಾರೆ. ಅಂತವರನ್ನು ಹೇಗೆ ಸೇರಿಸಿಕೊಳ್ಳುತ್ತೀರಿ’ ಎಂದು ಪ್ರಶ್ನಿಸಿದಾಗ, ಸಮಿತಿಯ ಪದಾಧಿಕಾರಿ ಅಶೋಕ್ ಅವರು ತೋಳು ಏರಿಸಿ ದಿನೇಶ್ ಅವರ ಮೇಲೆ ಹಲ್ಲೆ ಮಾಡಲು ಮುಂದಾದರು. ಆಗ ಸಭೆಯಲ್ಲಿದ್ದವರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.