<p><strong>ಶಿಕಾರಿಪುರ</strong>: ತಾಲ್ಲೂಕಿನ ಪುನೇದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಅಕ್ರಮ ಗೋಮಾಂಸ ಸಾಗಣೆ ಸಂಬಂಧ ಪೊಲೀಸರು ಆರೋಪಿಗಳನ್ನು ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಎರಡು ಕೋಮುಗಳ ಯುವಕರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪರಸ್ಪರ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಇಬ್ಬರು ಯುವಕರು ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ಶಿಕಾರಿಪುರಕ್ಕೆ ಬೈಕ್ ಹಾಗೂ ಆಟೊದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಣೆ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದ್ದ ಬಂಜಾರ ಸಮಾಜ ಮುಖಂಡ ರಾಘವೇಂದ್ರನಾಯ್ಕ, ಹಾಗೂ ಕೆಲ ಯುವಕರು ಪೊಲೀಸ್ ನೈತಿಕಗಿರಿ ಮಾಡಿದ್ದಾರೆ ಎಂದು ಆರೋಪಿಸಿದರು.</p><p>ಈ ಸಂಬಂಧ ಯುವಕರ ಮಧ್ಯೆ ವಾಗ್ವಾದವೂ ನಡೆದಿತ್ತು. ಪೊಲೀಸರು ನೈತಿಕಗಿರಿ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಘವೇಂದ್ರನಾಯ್ಕ ವಿಡಿಯೊ ಹಂಚಿಕೊಂಡಿದ್ದರು.</p><p>ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು ಗೋಮಾಂಸ ಸಾಗಣೆ ಕುರಿತು ಆರೋಪಿಗಳನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು. ಆಗ ಎರಡು ಕೋಮಿನ ಯುವಕರು ಠಾಣೆ ಎದುರು ಜಮಾಯಿಸಿ ವಾಗ್ವಾದ ನಡೆಸಿದರು. ಆಗ ಪರಸ್ಪರ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.</p><p>ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಂಚಿಕೊಪ್ಪ ಗ್ರಾಮದ ಮಂಜುನಾಥ್ ಹಾಗೂ ಶಿಕಾರಿಪುರದದ ಆರ್ಎಸ್ಎಸ್ ಕಾರ್ಯಕರ್ತ ಪ್ರದೀಪ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಘಟನೆಯ ಮಾಹಿತಿ ಪಡೆದರು.</p><p>‘ಪೊಲೀಸ್ ಠಾಣೆ ಎದುರು ಗಲಭೆಗೆ ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸ್ ಠಾಣೆಯ ಮುಂಭಾಗವೇ ಯುವಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ರಾಘವೇಂದ್ರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರಿಗೆ ಸೂಚಿಸಿದರು.</p><p>‘ಗೋಮಾಂಸ ಸಾಗಣೆ ವಿರುದ್ಧ ಪೊಲೀಸ್ ನೈತಿಕಗಿರಿ ಮಾಡಿದ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ಕೋಮಿನ ಪರ ತನಿಖೆ ನಡೆಯಬಾರದು‘ ಎಂದು ಪುರಸಭೆ ಸದಸ್ಯ ಎಸ್.ಪಿ. ನಾಗರಾಜಗೌಡ ಮನವಿ ಮಾಡಿದರು.</p><p>‘ಗೋಮಾಂಸ ಸಾಗಣೆ ಹಾಗೂ ಠಾಣೆ ಎದುರಿನ ಗಲಭೆ ಸಂಬಂಧ ಮಾಹಿತಿ ಪಡೆದು ಪ್ರಾಮಾಣಿಕವಾಗಿ ತನಿಖೆ ಮಾಡುತ್ತೇವೆ. ಪಟ್ಟಣದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಯಾರು ಮಾಡಬಾರದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದರು.</p><p>ಅರೋಪಿಗಳ ವಿರುದ್ಧ ಪ್ರಕರಣ: ಗೋಮಾಂಸ ಸಾಗಣೆ ಆರೋಪದ ಸಂಬಂಧ ಶಿಕಾರಿಪುರದ ಮಹಮದ್ ಅಫ್ಸರ್,ನಿಸಾರ್ ಅಹಮದ್, ಶಿರಾಳಕೊಪ್ಪ ನಿವಾಸಿಗಳಾದ ರಿಜ್ವಾನ್, ಸುಲ್ತಾನ್ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಕಾರಿಪುರ</strong>: ತಾಲ್ಲೂಕಿನ ಪುನೇದಹಳ್ಳಿ ಗ್ರಾಮದಲ್ಲಿ ಶುಕ್ರವಾರ ಅಕ್ರಮ ಗೋಮಾಂಸ ಸಾಗಣೆ ಸಂಬಂಧ ಪೊಲೀಸರು ಆರೋಪಿಗಳನ್ನು ವಶಪಡಿಸಿಕೊಂಡಿದ್ದು, ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆ ಎದುರು ಜಮಾಯಿಸಿದ ಎರಡು ಕೋಮುಗಳ ಯುವಕರು ವಾಗ್ವಾದ ನಡೆಸಿದ್ದಾರೆ. ಈ ವೇಳೆ ಪರಸ್ಪರ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ಇಬ್ಬರು ಯುವಕರು ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ಶಿಕಾರಿಪುರಕ್ಕೆ ಬೈಕ್ ಹಾಗೂ ಆಟೊದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಣೆ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದ್ದ ಬಂಜಾರ ಸಮಾಜ ಮುಖಂಡ ರಾಘವೇಂದ್ರನಾಯ್ಕ, ಹಾಗೂ ಕೆಲ ಯುವಕರು ಪೊಲೀಸ್ ನೈತಿಕಗಿರಿ ಮಾಡಿದ್ದಾರೆ ಎಂದು ಆರೋಪಿಸಿದರು.</p><p>ಈ ಸಂಬಂಧ ಯುವಕರ ಮಧ್ಯೆ ವಾಗ್ವಾದವೂ ನಡೆದಿತ್ತು. ಪೊಲೀಸರು ನೈತಿಕಗಿರಿ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ರಾಘವೇಂದ್ರನಾಯ್ಕ ವಿಡಿಯೊ ಹಂಚಿಕೊಂಡಿದ್ದರು.</p><p>ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು ಗೋಮಾಂಸ ಸಾಗಣೆ ಕುರಿತು ಆರೋಪಿಗಳನ್ನು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು. ಆಗ ಎರಡು ಕೋಮಿನ ಯುವಕರು ಠಾಣೆ ಎದುರು ಜಮಾಯಿಸಿ ವಾಗ್ವಾದ ನಡೆಸಿದರು. ಆಗ ಪರಸ್ಪರ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ.</p><p>ಕೆಲ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮಂಚಿಕೊಪ್ಪ ಗ್ರಾಮದ ಮಂಜುನಾಥ್ ಹಾಗೂ ಶಿಕಾರಿಪುರದದ ಆರ್ಎಸ್ಎಸ್ ಕಾರ್ಯಕರ್ತ ಪ್ರದೀಪ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p><p>ಪೊಲೀಸ್ ಠಾಣೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹಾಗೂ ಸಂಸದ ಬಿ.ವೈ. ರಾಘವೇಂದ್ರ ಘಟನೆಯ ಮಾಹಿತಿ ಪಡೆದರು.</p><p>‘ಪೊಲೀಸ್ ಠಾಣೆ ಎದುರು ಗಲಭೆಗೆ ಪ್ರಚೋದನೆ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪೊಲೀಸ್ ಠಾಣೆಯ ಮುಂಭಾಗವೇ ಯುವಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ರಾಘವೇಂದ್ರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರಿಗೆ ಸೂಚಿಸಿದರು.</p><p>‘ಗೋಮಾಂಸ ಸಾಗಣೆ ವಿರುದ್ಧ ಪೊಲೀಸ್ ನೈತಿಕಗಿರಿ ಮಾಡಿದ ಯುವಕರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ಕೋಮಿನ ಪರ ತನಿಖೆ ನಡೆಯಬಾರದು‘ ಎಂದು ಪುರಸಭೆ ಸದಸ್ಯ ಎಸ್.ಪಿ. ನಾಗರಾಜಗೌಡ ಮನವಿ ಮಾಡಿದರು.</p><p>‘ಗೋಮಾಂಸ ಸಾಗಣೆ ಹಾಗೂ ಠಾಣೆ ಎದುರಿನ ಗಲಭೆ ಸಂಬಂಧ ಮಾಹಿತಿ ಪಡೆದು ಪ್ರಾಮಾಣಿಕವಾಗಿ ತನಿಖೆ ಮಾಡುತ್ತೇವೆ. ಪಟ್ಟಣದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಯಾರು ಮಾಡಬಾರದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಹೇಳಿದರು.</p><p>ಅರೋಪಿಗಳ ವಿರುದ್ಧ ಪ್ರಕರಣ: ಗೋಮಾಂಸ ಸಾಗಣೆ ಆರೋಪದ ಸಂಬಂಧ ಶಿಕಾರಿಪುರದ ಮಹಮದ್ ಅಫ್ಸರ್,ನಿಸಾರ್ ಅಹಮದ್, ಶಿರಾಳಕೊಪ್ಪ ನಿವಾಸಿಗಳಾದ ರಿಜ್ವಾನ್, ಸುಲ್ತಾನ್ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>