ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಗರ: ಅಂತರ್ ಜಿಲ್ಲಾ ದ್ವಿಚಕ್ರ ವಾಹನ ಕಳ್ಳರ ಬಂಧನ

Last Updated 7 ಏಪ್ರಿಲ್ 2022, 4:49 IST
ಅಕ್ಷರ ಗಾತ್ರ

ಸಾಗರ: ವಿವಿಧ ಜಿಲ್ಲೆಗಳಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಬಂಧಿಸಿರುವ ಇಲ್ಲಿನ ಪೊಲೀಸರು ಬಂಧಿತರಿಂದ ₹30.50 ಲಕ್ಷ ಮೌಲ್ಯದ 22 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಹಾವೇರಿಯ ಸುದೀಪ್ ಅಲಿಯಾಸ್‌ ಚೂಪಾ, ಅಜಯ್ ಅಲಿಯಾಸ್‌ ಅಜ್ಜಪ್ಪ, ಗಂಗಾಧರ ಅಲಿಯಾಸ್‌ ಸಂಜು ಬಂಧಿತ ಆರೋಪಿಗಳು. ಕಳವು ಮಾಡಿದ ಬೈಕ್‌ಗಳನ್ನು ಖರೀದಿಸಿದ ಹಾವೇರಿಯ ಗುರುರಾಜ್ ಎಂಬುವವರನ್ನೂ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಸಾಗರ, ಹೊಸನಗರ, ತೀರ್ಥಹಳ್ಳಿ, ಆನವಟ್ಟಿ, ಸೊರಬ, ಶಿರಾಳಕೊಪ್ಪ, ಹಾವೇರಿ, ಕೊಪ್ಪಳ, ಬಳ್ಳಾರಿ ಹಾಗೂ ವಿವಿಧೆಡೆ ಬೈಕ್‌ಗಳನ್ನು ಕಳವು ಮಾಡಿದ್ದರು ಎಂದು ಪೊಲೀಸರುತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT