ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಗಂಧ ಕಳ್ಳರ ಬಂಧನ

Last Updated 5 ಜನವರಿ 2022, 5:14 IST
ಅಕ್ಷರ ಗಾತ್ರ

ಸಾಗರ: ಇಲ್ಲಿನ ಅರಣ್ಯ ವಲಯ ವ್ಯಾಪ್ತಿಯ ಮಂಕೋಡು ಗ್ರಾಮದ ಜೆಪಿ ನಗರದಲ್ಲಿ ಅಕ್ರಮವಾಗಿ ಶ್ರೀಗಂಧದ ಚಕ್ಕೆಗಳನ್ನು ಕೆತ್ತುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ಬಂಧಿಸಿದ್ದಾರೆ.

ಅಬ್ದುಲ್ ರಜಾಕ್ ಮತ್ತು ವೆಂಕಟರಮಣ ಬಂಧಿತರು. ಅವರಿಂದ ಐದೂ ಕಾಲು ಕೆಜಿ ಶ್ರೀಗಂಧದ ಚಕ್ಕೆ ಹಾಗೂ ಒಂದು ಬೈಕ್ ಅನ್ನು ವಶಪಡಿಸಿಕೊಂಡು ಮೊಕದ್ದಮೆ ದಾಖಲಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಲಯ ಅರಣ್ಯಾಧಿಕಾರಿ ಆರ್. ಪ್ರಮೋದ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಅಶೋಕ್, ಅರಣ್ಯ ರಕ್ಷಕರಾದ ಅಶೋಕ್ ಹಾಗೂ ಸುಮಿತಾ, ಲೋಕೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT