<p><strong>ಸಾಗರ:</strong> ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಶ್ರೀಗಂಧ ಸಂಕೀರ್ಣದ ಆವರಣದಲ್ಲಿ ಕರಕುಶಲಕರ್ಮಿಗಳು ಸೋಮವಾರ ಪ್ರತಿಭಟನೆ ನಡೆಸಿದರು. </p><p>60 ವರ್ಷ ಮೇಲ್ಪಟ್ಟ ನೊಂದಾಯಿತ ಕರಕಶಲಕರ್ಮಿಗಳಿಗೆ ಮಾಸಾಶನ ನೀಡಬೇಕು, ಈ ಹಿಂದೆ ಇದ್ದ ವಿಮಾ ಯೋಜನೆಯನ್ನು ಸರ್ಕಾರ ಮರು ಜಾರಿಗೊಳಿಸಬೇಕು, ಮೃತರಾದ ನೊಂದಾಯಿತ ಕುಶಲಕರ್ಮಿಗಳ ಗುರುತಿನ ಪತ್ರವನ್ನು ಮೃತರ ವಾರಸುದಾರರ ಹೆಸರಿಗೆ ವರ್ಗಾಯಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p><p>ಈ ಹಿಂದೆ ಅಪಾರ ಪ್ರಮಾಣದಲ್ಲಿ ಶ್ರೀಗಂಧ ಲಭ್ಯವಿದ್ದ ಕಾಲದಲ್ಲಿ ಕುಶಲಕರ್ಮಿಗಳು ಉತ್ತಮ ಸ್ಥಿತಿಯಲ್ಲಿದ್ದರು. ಈಗ ಶ್ರೀಗಂಧದ ಲಭ್ಯತೆ ಪ್ರಮಾಣ ತೀರಾ ಕಡಿಮೆಯಾಗಿರುವುದರಿಂದ ಅವರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ಕುಶಲಕರ್ಮಿಗಳ ಕಲ್ಯಾಣಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p><p>ವಿಶ್ವ 1, ವಿಶ್ವ 2 ಹಾಗೂ ಪಶ್ಚಿಮಘಟ್ಟ ಡಿಸಿಎಚ್ ವಸತಿ ಯೋಜನೆಯಡಿ ಕುಶಲಕರ್ಮಿಗಳು, ಸರ್ಕಾರ ಜಂಟಿಯಾಗಿ ಮನೆ ನಿರ್ಮಿಸುವ ಯೋಜನೆ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ. ಈ ಯೋಜನೆಯಡಿ ನಿರ್ಮಿಸಿರುವ ಮನೆಗಳ ಹಕ್ಕುಪತ್ರವನ್ನು ಸರ್ಕಾರ ಕುಶಲಕರ್ಮಿಗಳಿಗೆ ನೀಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</p><p>ಕುಶಲಕರ್ಮಿಗಳನ್ನು ಕಲಾವಿದರು ಎಂಬ ಪಟ್ಟಿಗೆ ಸೇರಿಸಿರುವುದರಿಂದ ಅವರಿಗೆ ಅನೇಕ ಸೌಲಭ್ಯಗಳು ದೊರಕುತ್ತಿಲ್ಲ. ಕುಶಲಕರ್ಮಿಗಳನ್ನು ಕಾರ್ಮಿಕರ ಪಟ್ಟಿಗೆ ಸೇರಿಸುವ ಸಂಬಂಧ ಸಚಿವ ಸಂತೋಷ್ ಲಾಡ್ ಅವರ ಜೊತೆ ಮಾತುಕತೆ ನಡೆಸುವುದಾಗಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </p><p>ಸರ್ಕಾರದ ಯೋಜನೆಯಡಿ ನಿರ್ಮಿಸಿದ ಮನೆಗಳ ಹಕ್ಕುಪತ್ರವನ್ನು ಕರಕುಶಲಕರ್ಮಿಗಳ ಹೆಸರಿಗೆ ನೀಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.</p><p>ಕರಕುಶಲಕರ್ಮಿಗಳ ಹೋರಾಟ ಸಮಿತಿಯ ಅಧ್ಯಕ್ಷ ಲೋಕೇಶ್ ಕುಮಾರ್, ಪ್ರಮುಖರಾದ ಅಣ್ಣಪ್ಪ, ದೀಪಕ್ , ನಾಗರಾಜ್, ಶಿವಾನಂದ್, ತಿರುಮಲೇಶ್, ನಾಗೇಶ್ ಶಿರಸಿ, ಗುರುಪ್ರಸಾದ್, ದಿವಾಕರ, ಧರ್ಮರಾಜ್, ಮೀನಾಕ್ಷಿ ರಾಮಚಂದ್ರ, ಆಶಾ ಎಂ.ಎನ್. ಶಕುಂತಲಾ, ಜಯಂತಿ, ಸವಿತಾ, ವಿನಾಯಕ ಗುಡಿಗಾರ್, ಲಕ್ಷ್ಮಣ, ಅಣ್ಣಪ್ಪ ಕೆ.ಜಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಗರ:</strong> ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಲ್ಲಿನ ಶ್ರೀಗಂಧ ಸಂಕೀರ್ಣದ ಆವರಣದಲ್ಲಿ ಕರಕುಶಲಕರ್ಮಿಗಳು ಸೋಮವಾರ ಪ್ರತಿಭಟನೆ ನಡೆಸಿದರು. </p><p>60 ವರ್ಷ ಮೇಲ್ಪಟ್ಟ ನೊಂದಾಯಿತ ಕರಕಶಲಕರ್ಮಿಗಳಿಗೆ ಮಾಸಾಶನ ನೀಡಬೇಕು, ಈ ಹಿಂದೆ ಇದ್ದ ವಿಮಾ ಯೋಜನೆಯನ್ನು ಸರ್ಕಾರ ಮರು ಜಾರಿಗೊಳಿಸಬೇಕು, ಮೃತರಾದ ನೊಂದಾಯಿತ ಕುಶಲಕರ್ಮಿಗಳ ಗುರುತಿನ ಪತ್ರವನ್ನು ಮೃತರ ವಾರಸುದಾರರ ಹೆಸರಿಗೆ ವರ್ಗಾಯಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.</p><p>ಈ ಹಿಂದೆ ಅಪಾರ ಪ್ರಮಾಣದಲ್ಲಿ ಶ್ರೀಗಂಧ ಲಭ್ಯವಿದ್ದ ಕಾಲದಲ್ಲಿ ಕುಶಲಕರ್ಮಿಗಳು ಉತ್ತಮ ಸ್ಥಿತಿಯಲ್ಲಿದ್ದರು. ಈಗ ಶ್ರೀಗಂಧದ ಲಭ್ಯತೆ ಪ್ರಮಾಣ ತೀರಾ ಕಡಿಮೆಯಾಗಿರುವುದರಿಂದ ಅವರ ಬದುಕು ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ಕುಶಲಕರ್ಮಿಗಳ ಕಲ್ಯಾಣಕ್ಕಾಗಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.</p><p>ವಿಶ್ವ 1, ವಿಶ್ವ 2 ಹಾಗೂ ಪಶ್ಚಿಮಘಟ್ಟ ಡಿಸಿಎಚ್ ವಸತಿ ಯೋಜನೆಯಡಿ ಕುಶಲಕರ್ಮಿಗಳು, ಸರ್ಕಾರ ಜಂಟಿಯಾಗಿ ಮನೆ ನಿರ್ಮಿಸುವ ಯೋಜನೆ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ. ಈ ಯೋಜನೆಯಡಿ ನಿರ್ಮಿಸಿರುವ ಮನೆಗಳ ಹಕ್ಕುಪತ್ರವನ್ನು ಸರ್ಕಾರ ಕುಶಲಕರ್ಮಿಗಳಿಗೆ ನೀಡಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.</p><p>ಕುಶಲಕರ್ಮಿಗಳನ್ನು ಕಲಾವಿದರು ಎಂಬ ಪಟ್ಟಿಗೆ ಸೇರಿಸಿರುವುದರಿಂದ ಅವರಿಗೆ ಅನೇಕ ಸೌಲಭ್ಯಗಳು ದೊರಕುತ್ತಿಲ್ಲ. ಕುಶಲಕರ್ಮಿಗಳನ್ನು ಕಾರ್ಮಿಕರ ಪಟ್ಟಿಗೆ ಸೇರಿಸುವ ಸಂಬಂಧ ಸಚಿವ ಸಂತೋಷ್ ಲಾಡ್ ಅವರ ಜೊತೆ ಮಾತುಕತೆ ನಡೆಸುವುದಾಗಿ ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. </p><p>ಸರ್ಕಾರದ ಯೋಜನೆಯಡಿ ನಿರ್ಮಿಸಿದ ಮನೆಗಳ ಹಕ್ಕುಪತ್ರವನ್ನು ಕರಕುಶಲಕರ್ಮಿಗಳ ಹೆಸರಿಗೆ ನೀಡುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.</p><p>ಕರಕುಶಲಕರ್ಮಿಗಳ ಹೋರಾಟ ಸಮಿತಿಯ ಅಧ್ಯಕ್ಷ ಲೋಕೇಶ್ ಕುಮಾರ್, ಪ್ರಮುಖರಾದ ಅಣ್ಣಪ್ಪ, ದೀಪಕ್ , ನಾಗರಾಜ್, ಶಿವಾನಂದ್, ತಿರುಮಲೇಶ್, ನಾಗೇಶ್ ಶಿರಸಿ, ಗುರುಪ್ರಸಾದ್, ದಿವಾಕರ, ಧರ್ಮರಾಜ್, ಮೀನಾಕ್ಷಿ ರಾಮಚಂದ್ರ, ಆಶಾ ಎಂ.ಎನ್. ಶಕುಂತಲಾ, ಜಯಂತಿ, ಸವಿತಾ, ವಿನಾಯಕ ಗುಡಿಗಾರ್, ಲಕ್ಷ್ಮಣ, ಅಣ್ಣಪ್ಪ ಕೆ.ಜಿ. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>