ಪ್ರಾಸ್ತಾವಿಕವಾಗಿ ಮಾತನಾಡಿದ ರಂಗಾಯಣ ನಿರ್ದೇಶಕ ಸಂದೇಶ ಜವಳಿ, ‘ಶಿವಮೊಗ್ಗ ರಂಗಾಯಣದಲ್ಲಿ ಆವರಣದಲ್ಲಿ ವಿವಿಧ ಚಟುವಟಿಕೆ ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ. ಬಯಲು ರಂಗಮಂದಿರ, ಉದ್ಯಾನ, ಶಿಲ್ಪಕಲಾಕೃತಿಗಳು ಸೇರಿ ಆವರಣವನ್ನು ಪರಿಪೂರ್ಣವಾಗಿ ಬಳಕೆ ಮಾಡಲು ಯೋಜನೆ ರೂಪಿಸಲಾಗುತ್ತಿದೆ. ಇದರ ಭಾಗವಾಗಿ ಶಿಲ್ಪಕಲಾ ಅಕಾಡೆಮಿ ಸಹಯೋಗದಲ್ಲಿ ಸಿಮೆಂಟ್ ಕಲಾ ಶಿಬಿರ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಕ್ರಮ ಆಯೋಜಿಸಲಾಗುವುದು’ ಎಂದರು.
ರಂಗಾಯಣದ ಆಡಳಿತಾಧಿಕಾರಿ ಶಫಿ ಸಾದುದ್ದೀನ್ ವಂದಿಸಿದರು. ಶಿಬಿರದ ನಿರ್ದೇಶಕ ಕೆ. ನಾರಾಯಣ ರಾವ್, ಅಕಾಡೆಮಿಯ ಸದಸ್ಯ ಸಂಚಾಲಕ ವಿಪಿನ್ ಭದೌರಿಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಇದ್ದರು.