ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಾನದಿಗೆ ಹಾರಿದ ವ್ಯಕ್ತಿಯನ್ನು ರಕ್ಷಿಸಿದ ಎಎಸ್ಐ

Last Updated 22 ಜನವರಿ 2022, 4:06 IST
ಅಕ್ಷರ ಗಾತ್ರ

ಹೊಳೆಹೊನ್ನೂರು: ಸಮೀಪದ ಅರಹತೊಳಲು ಕೈಮರದ ವ್ಯಕ್ತಿಯೊಬ್ಬರು ಗುರುವಾರ ರಾತ್ರಿ ಶಿವಮೊಗ್ಗದ ಬಿ.ಎಚ್ ರಸ್ತೆಯ ಹಳೆಯ ತುಂಗಾ ಸೇತುವೆ ಮೇಲಿಂದ ನದಿಗೆ ಹಾರಿದ್ದು, ಎಎಸ್‌ಐ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಟುಂಬ ಕಲಹದಿಂದ ಮನನೊಂದ ಮಂಜುನಾಥ್ ಗೌಂಡರ್ ಮದ್ಯದ ಅಮಲಿನಲ್ಲಿ ನದಿಗೆ ಹಾರಿದ್ದರು. ಆಗ ಸಮೀಪದಲ್ಲೇ ಇದ್ದಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಶ್ರೀನಿವಾಸ್ ಸಮಯಪ್ರಜ್ಞೆ ಮೆರೆದರು. ತಕ್ಷಣ ಅಲ್ಲಿಯೇ ಇದ್ದ ಆಟೊ ಚಾಲಕರಾದ ಅರ್ಜುನ್ ಹಾಗೂ ಕಾಂತ ಎಂಬುವವರ ನೆರವು ಪಡೆದು ನದಿಯಲ್ಲಿ ಮುಳುಗುತ್ತಿದ್ದ ಮಂಜುನಾಥನನ್ನು ರಕ್ಷಿಸಿದ್ದಾರೆ.

ಮೇಲಿಂದ ಬಿದ್ದ ರಭಸಕ್ಕೆ ಕಲ್ಲಿನ ಏಟು ಬಿದ್ದು ಮಂಜುನಾಥ ಅವರ ಸೊಂಟ ಮುರಿದಿದ್ದು, ಸದ್ಯ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕರ್ತವ್ಯದ ಅವಧಿ ಅಲ್ಲದಿದ್ದರೂ ವ್ಯಕ್ತಿಯ ರಕ್ಷಣೆ ಮಾಡಿದ ಎಎಸ್ಐ ಶ್ರೀನಿವಾಸ್ ಹಾಗೂ ಆಟೊ ಚಾಲಕರಾದ ಅರ್ಜುನ್ ಹಾಗೂ ಕಾಂತ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT