<p><strong>ಶಿವಮೊಗ್ಗ</strong>: ಸಾಗರದ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಇತಿಹಾಸ ಉಪನ್ಯಾಸಕರೊಬ್ಬರ ಮೇಲೆ ನಡೆದ ಹಲ್ಲೆ ಖಂಡಿಸಿ ಕುವೆಂಪು ವಿವಿ ಇತಿಹಾಸ ಪ್ರಾಧ್ಯಾಪಕರ ಸಂಘ, ಉನ್ನತ ಶಿಕ್ಷಣ ವೇದಿಕೆ, ಪದವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘದಿಂದ ಸೋಮವಾರ ಡಿಸಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಲಾಯಿತು.</p>.<p>ಉಪನ್ಯಾಸಕ ರಾಜು ಅವರ ಮೇಲೆ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಜೊತೆಯಲ್ಲಿ ಬಂದು ಕರ್ತವ್ಯದ ಅವಧಿಯಲ್ಲಿಯೇ ಹಲ್ಲೆ ನಡೆಸಿದ್ದಾನೆ. ಇದು ತೀವ್ರ ಖಂಡನೀಯ ಎಂದು ಮನವಿದಾರರು ದೂರಿದ್ದಾರೆ.</p>.<p>ಇದು ಕೇವಲ ಶಿಕ್ಷಕರ ಮೇಲಿನ ಹಲ್ಲೆ ಮಾತ್ರವಲ್ಲ, ಶಿಕ್ಷಣ ಇಲಾಖೆಯ ಮೇಲೆ ನಡೆದ ಹಲ್ಲೆಯಾಗಿದೆ. ಮಾನವ ಹಕ್ಕಿನ ಉಲ್ಲಂಘನೆಯಾಗಿದೆ. ಕೂಡಲೇ ಅಧ್ಯಾಪಕರ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿ ಮತ್ತು ಆತನ ತಂದೆಯ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಕಾಲೇಜಿಗೆ ಪ್ರವೇಶದ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳು ನಡತೆ ಪ್ರಮಾಣ ಪತ್ರ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು. ಹೊರಗಿನವರು ಯಾರಾದರೂ ಕಾಲೇಜಿಗೆ ಬರುವುದಾದರೆ ಪ್ರಾಂಶುಪಾಲರ ಅನುಮತಿ ಪಡೆಯಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.</p>.<p>ಈ ಸಂದರ್ಭದಲ್ಲಿ ಅಧ್ಯಾಪಕರಾದ ಕೆ.ಎನ್.ಮಂಜುನಾಥ್, ರೂಪಾ, ಚನ್ನೇಶ್ ಹೊನ್ನಾಳಿ, ರಂಗನಾಥ್ರಾವ್ ಕರಾಡ್, ಪ್ರಸನ್ನ, ಶಂಭುಲಿಂಗಮೂರ್ತಿ, ಪ್ರೊ.ಕಾಶಿನಾಥ್, ಮಂಜುನಾಥ್, ಸಕಲೇಶ್ ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ</strong>: ಸಾಗರದ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜಿನ ಇತಿಹಾಸ ಉಪನ್ಯಾಸಕರೊಬ್ಬರ ಮೇಲೆ ನಡೆದ ಹಲ್ಲೆ ಖಂಡಿಸಿ ಕುವೆಂಪು ವಿವಿ ಇತಿಹಾಸ ಪ್ರಾಧ್ಯಾಪಕರ ಸಂಘ, ಉನ್ನತ ಶಿಕ್ಷಣ ವೇದಿಕೆ, ಪದವಿ ಕಾಲೇಜು ಕನ್ನಡ ಅಧ್ಯಾಪಕರ ಸಂಘದಿಂದ ಸೋಮವಾರ ಡಿಸಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಲಾಯಿತು.</p>.<p>ಉಪನ್ಯಾಸಕ ರಾಜು ಅವರ ಮೇಲೆ ವಿದ್ಯಾರ್ಥಿಯೊಬ್ಬ ತನ್ನ ತಂದೆಯ ಜೊತೆಯಲ್ಲಿ ಬಂದು ಕರ್ತವ್ಯದ ಅವಧಿಯಲ್ಲಿಯೇ ಹಲ್ಲೆ ನಡೆಸಿದ್ದಾನೆ. ಇದು ತೀವ್ರ ಖಂಡನೀಯ ಎಂದು ಮನವಿದಾರರು ದೂರಿದ್ದಾರೆ.</p>.<p>ಇದು ಕೇವಲ ಶಿಕ್ಷಕರ ಮೇಲಿನ ಹಲ್ಲೆ ಮಾತ್ರವಲ್ಲ, ಶಿಕ್ಷಣ ಇಲಾಖೆಯ ಮೇಲೆ ನಡೆದ ಹಲ್ಲೆಯಾಗಿದೆ. ಮಾನವ ಹಕ್ಕಿನ ಉಲ್ಲಂಘನೆಯಾಗಿದೆ. ಕೂಡಲೇ ಅಧ್ಯಾಪಕರ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿ ಮತ್ತು ಆತನ ತಂದೆಯ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.</p>.<p>ಈ ರೀತಿಯ ಘಟನೆಗಳು ಮರುಕಳಿಸದಂತೆ ತಡೆಯಲು ಕಾಲೇಜಿಗೆ ಪ್ರವೇಶದ ಸಂದರ್ಭದಲ್ಲಿಯೇ ವಿದ್ಯಾರ್ಥಿಗಳು ನಡತೆ ಪ್ರಮಾಣ ಪತ್ರ ಸಲ್ಲಿಸುವುದನ್ನು ಕಡ್ಡಾಯಗೊಳಿಸಬೇಕು. ಹೊರಗಿನವರು ಯಾರಾದರೂ ಕಾಲೇಜಿಗೆ ಬರುವುದಾದರೆ ಪ್ರಾಂಶುಪಾಲರ ಅನುಮತಿ ಪಡೆಯಬೇಕು. ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.</p>.<p>ಈ ಸಂದರ್ಭದಲ್ಲಿ ಅಧ್ಯಾಪಕರಾದ ಕೆ.ಎನ್.ಮಂಜುನಾಥ್, ರೂಪಾ, ಚನ್ನೇಶ್ ಹೊನ್ನಾಳಿ, ರಂಗನಾಥ್ರಾವ್ ಕರಾಡ್, ಪ್ರಸನ್ನ, ಶಂಭುಲಿಂಗಮೂರ್ತಿ, ಪ್ರೊ.ಕಾಶಿನಾಥ್, ಮಂಜುನಾಥ್, ಸಕಲೇಶ್ ಸೇರಿದಂತೆ ಹಲವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>