ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಶ್ರಯ ನಿವೇಶನಕ್ಕೆ ಸಂಬಂಧಿಸಿದಂತೆ ನಕಲಿ ಹಕ್ಕುಪತ್ರವನ್ನು ಸೃಷ್ಟಿಸಿ ಬಡವರನ್ನು ವಂಚಿಸಲಾಗಿದೆ. ಒಂದೇ ನಿವೇಶನಕ್ಕೆ ಎರಡು ಹಕ್ಕುಪತ್ರ ನೀಡಲಾಗಿದ್ದು, ಇಬ್ಬರ ಹೆಸರಿಗೆ ಖಾತೆ ಕೂಡ ಆಗಿದೆ. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಾದರೆ ಉನ್ನತ ಮಟ್ಟದ ತನಿಖೆಯ ಅಗತ್ಯವಿದೆ’ ಎಂದು ಒತ್ತಾಯಿಸಿದರು.