ಘಟನೆಯ ನಂತರ ಗಾಂಧಿ ಬಜಾರ್, ಆಜಾದ್ ನಗರ, ರವಿ ವರ್ಮ ಬೀದಿಯಲ್ಲಿ ಎರಡು ಗುಂಪುಗಳ ಮಧ್ಯೆ ಘರ್ಷಣೆ ನಡೆದಿವೆ. ರಾಮಣ್ಣ ಶ್ರೇಷ್ಟಿ ಪಾರ್ಕ್ ಬಳಿ ಒಂದು ಕಾರು, ಕಸ್ತೂರ ಬಾ ರಸ್ತೆಯಲ್ಲಿ ಒಂದು ಆಟೊರಿಕ್ಷಾ ಜಖಂಗೊಳಿಸಲಾಗಿದೆ. ಜೋರ್ ಬಜಾರ್ನಲ್ಲಿ ಮೂವರು ವ್ಯಾಪಾರಿಗಳ ಮೇಲೆ ಹಲ್ಲೆ ನಡೆದಿದೆ. ಇಡೀ ಗಾಂಧಿ ಬಜಾರ್ ಸ್ತಬ್ಧವಾಗಿದೆ. ಗ್ರಾಹಕರನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಲಾಗಿದೆ.